ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ಪೇಟೆ;-ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಳಗಿನ ಒಕ್ಕಲಿಗರ ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ಡಾಂಬರೀಕರಣ ರಸ್ತೆ ಸಂಪೂರ್ಣ ಹಾಳಾಗಿದ್ದು ಈ ಬಗ್ಗೆ ಸ್ಥಳೀಯ ನಾಗರೀಕರು ಸಾಕಷ್ಟು ಭಾರಿ ಮನವಿ ಮಾಡಿಕೊಳ್ಳುವ ಮೂಲಕ ಬೇಡಿಕೆ ಸಲ್ಲಿಸುತ್ತಿದ್ದರು.ಬಹುದಿನಗಳ ಬೇಡಿಕಯಂತೆ ಸರ್ಕಾರದ ಶಾಸಕರ ವಿಶೇಷ ಅನುದಾನದಡಿಯಲ್ಲಿ ಈ ರಸ್ತೆಯ ಅಭಿವೃದ್ದಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಕಾಮಗಾರಿ ಪ್ರಗತಿಯಲ್ಲಿದ್ದು ಆದರ ವೀಕ್ಷಣೆ ನಡೆಸಿ ಕಾಮಗಾರಿಯನ್ನು ಗುಣಮಟ್ಟದಲ್ಲಿ ಮಾಡುವಂತೆ ಗುತ್ತಿಗೆದಾರನಿಗೆ ಸೂಚಿಸಿದರು.
ನಂತರ ಕೆಳಗಿನ ಒಕ್ಕಲಿಗರ ಕೆರೆಹಳ್ಳಿ ನಿವಾಸಿಗಳು ಶಾಸಕ ಗೋಪಾಲಕೃಷ್ಣ ಬೇಳೂರು ಇವರನ್ನು ಮೈಸೂರು ಪೇಟಾ ಶಾಲು ಹಾಕಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಆಧ್ಯಕ್ಷ ಚಿದಂಬರ್, ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಬಿ.ಜೆ.ಚಂದ್ರುಮೌಳಿಗೌಡರು, ಎಪಿಎಂಸಿ ಮಾಜಿ ಆಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಕೆರೆಹಳ್ಳಿ ರವೀಂದ್ರ, ಕೆ.ದೇವರಾಜ್ಕೆರೆಹಳ್ಳಿ , ಮುರಳಿಧರ, ಮಂಜುನಾಥ,ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷಿö್ಮ.ಸದಸ್ಯರಾದ ಡಿ.ಈ.ಮಧುಸೂದನ್, ಆಶೀಫ್ಭಾಷಾ ,ನಿರೂಫ್ಕುಮಾರ್,ಸಾರಾಭಿ. ಪ್ರಕಾಶಪಾಲೇಕರ್, ಮಹಾಲಕ್ಷಿö್ಮ, ಅರಸಾಳು ಗ್ರಾಮ ಪಂಚಾಯಿತ್ ಸದಸ್ಯ, ಉಮಾಕರ್, ಹರ್ಷಕುಮಾರ್,ಖಲೀಲ್ ಷರೀಫ್,ವಕೀಲರಾದ ಬಸವರಾಜ್ , ಶಿವು ವಡಾಹೊಸಳ್ಳಿ, ಇನ್ನಿತರರು ಹಾಜರಿದ್ದರು.