ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ;-ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಳಗಿನ ಒಕ್ಕಲಿಗರ ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ಡಾಂಬರೀಕರಣ ರಸ್ತೆ ಸಂಪೂರ್ಣ ಹಾಳಾಗಿದ್ದು ಈ ಬಗ್ಗೆ ಸ್ಥಳೀಯ ನಾಗರೀಕರು ಸಾಕಷ್ಟು ಭಾರಿ ಮನವಿ ಮಾಡಿಕೊಳ್ಳುವ ಮೂಲಕ ಬೇಡಿಕೆ ಸಲ್ಲಿಸುತ್ತಿದ್ದರು.ಬಹುದಿನಗಳ ಬೇಡಿಕಯಂತೆ ಸರ್ಕಾರದ ಶಾಸಕರ ವಿಶೇಷ ಅನುದಾನದಡಿಯಲ್ಲಿ ಈ ರಸ್ತೆಯ ಅಭಿವೃದ್ದಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಕಾಮಗಾರಿ ಪ್ರಗತಿಯಲ್ಲಿದ್ದು ಆದರ ವೀಕ್ಷಣೆ ನಡೆಸಿ ಕಾಮಗಾರಿಯನ್ನು ಗುಣಮಟ್ಟದಲ್ಲಿ ಮಾಡುವಂತೆ ಗುತ್ತಿಗೆದಾರನಿಗೆ ಸೂಚಿಸಿದರು.

ನಂತರ ಕೆಳಗಿನ ಒಕ್ಕಲಿಗರ ಕೆರೆಹಳ್ಳಿ ನಿವಾಸಿಗಳು ಶಾಸಕ ಗೋಪಾಲಕೃಷ್ಣ ಬೇಳೂರು ಇವರನ್ನು  ಮೈಸೂರು ಪೇಟಾ ಶಾಲು ಹಾಕಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಆಧ್ಯಕ್ಷ ಚಿದಂಬರ್, ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಬಿ.ಜೆ.ಚಂದ್ರುಮೌಳಿಗೌಡರು, ಎಪಿಎಂಸಿ ಮಾಜಿ ಆಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಕೆರೆಹಳ್ಳಿ ರವೀಂದ್ರ, ಕೆ.ದೇವರಾಜ್‌ಕೆರೆಹಳ್ಳಿ , ಮುರಳಿಧರ, ಮಂಜುನಾಥ,ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷಿö್ಮ.ಸದಸ್ಯರಾದ ಡಿ.ಈ.ಮಧುಸೂದನ್, ಆಶೀಫ್‌ಭಾಷಾ ,ನಿರೂಫ್‌ಕುಮಾರ್,ಸಾರಾಭಿ. ಪ್ರಕಾಶಪಾಲೇಕರ್, ಮಹಾಲಕ್ಷಿö್ಮ, ಅರಸಾಳು ಗ್ರಾಮ ಪಂಚಾಯಿತ್ ಸದಸ್ಯ, ಉಮಾಕರ್, ಹರ್ಷಕುಮಾರ್,ಖಲೀಲ್ ಷರೀಫ್,ವಕೀಲರಾದ ಬಸವರಾಜ್ , ಶಿವು ವಡಾಹೊಸಳ್ಳಿ, ಇನ್ನಿತರರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago