ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ

– ನೂರಾರು ಪ್ರತಿಭೆಗಳಿಗೆ ವೇದಿಕೆ: ಅದ್ದೂರಿ ವೇದಿಕೆ

– ಸುಮಾರು 6000 ಮಂದಿ ಭಾಗಿ… ನೂರಾರು ಕಲಾವಿದರಿಗೆ ಗೌರವ

– 300ಕ್ಕೂ ಹೆಚ್ಚು ಸಾಧಕರಿಗೆ ಒಂದೇ ವೇದಿಕೆಯಲ್ಲಿ ಗೌರವ

– ರಾಜ್ಯದಲ್ಲೇ ವಿಭಿನ್ನ ಕಾರ್ಯಕ್ರಮ ಮಾಡಿ ಗೆದ್ದ ಸಂಸ್ಥೆ

ರಾಜ್ಯದ ಪ್ರಸಿದ್ಧ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ ಪ್ರೆಸ್ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಸಂಸ್ಕೃತಿ ಮಂದಿರ ಆವರಣ ಹಾಗೂ ಗರ್ಲ್ಸ್ ಹೈ ಸ್ಕೂಲ್  ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು ಆರರಿಂದ ಏಳು ಸಾವಿರ ಮಂದಿ ಮೂರು ದಿನಗಳ ಕಾಲ ಭಾಗಿಯಾದರು. ಈ ಕಾರ್ಯಕ್ರಮ ಮಲೆನಾಡು ಮಾತ್ರವಲ್ಲದೆ ರಾಜ್ಯಕ್ಕೆ ಮಾದರಿ ಕಾರ್ಯಕ್ರಮವಾಯಿತು.

ಮಲೆನಾಡಿನ ಖ್ಯಾತ ರಾಜಕೀಯ, ಧಾರ್ಮಿಕ, ಸಾಹಿತ್ಯ, ಕಲೆ, ಕೃಷಿ, ಶೈಕ್ಷಣಿಕ ಕ್ಷೇತ್ರದ ಗಣ್ಯರು ಭಾಗಿಯಾಗಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಕೃಷಿ ಹಾಗೂ ಶೈಕ್ಷಣಿಕ ಸಮ್ಮೇಳನ, ಆಹಾರ ಮೇಳ, ಆರ್ಟ್ ಎಕ್ಸ್ಪೋ, ಉದ್ಯೋಗ ಹಾಗೂ ಕೌಶಲ್ಯ ಮೇಳ, ಸ್ಟಾರ್ಟ್ ಅಪ್ ಹಾಗೂ ಮಹಿಳಾ ಉದ್ಯಮಿಗಳ ಸಮಾವೇಶ ಸೇರಿ ಅನೇಕ ಕಾರ್ಯಕ್ರಮಗಳು ಪ್ರತಿ ದಿನ 4 ವೇದಿಕೆಯಲ್ಲಿ ನಡೆದವು. ನೂರಾರು ಗಣ್ಯರು ಭಾಗಿಯಾದರು.

ಕಾರ್ಯಕ್ರಮದ ವಿಶೇಷತೆಗಳು

ಕೃಷಿಮೇಳ :- 30ಕ್ಕೂ ಹೆಚ್ಚು ಕೃಷಿ ಮಳಿಗೆಗಳು ಭಾಗಿ

ಆರೋಗ್ಯ ಮೇಳ :- ನಾರಾಯಣ ಹೃದಯಾಲಯ ಮತ್ತು ರೋಟರಿ  ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ 200ಕ್ಕೂ ಹೆಚ್ಚು ಮಂದಿಗೆ ತಪಾಸಣೆ ಮತ್ತು ರಕ್ತದಾನ

10 ಕ್ಕೂ ಹೆಚ್ಚು ಚಿತ್ರ ಕಲಾವಿದರಿಂದ ಆರ್ಟ್ ಎಕ್ಸ್ ಪೋ

ಆಹಾರಮೇಳ :- 15ಕ್ಕೂ ಹೆಚ್ಚು ಮಳಿಗೆಗಳಿಂದ ಆಹಾರಮೇಳ

ಕೃಷಿ ಸಮ್ಮೇಳನ ಸಂವಾದ:- ತಜ್ಞರಿಂದ ರೈತರಿಗೆ ಮಾಹಿತಿ, 200 ಕ್ಕೂ ಹೆಚ್ಚು ರೈತರು ಭಾಗಿ

ಸುಮಾರು 15 ಮಂದಿ ರೈತ ಸಾಧಕರು ಹಾಗೂ ರೈತ ಸ್ಟಾರ್ಟ್ ಅಪ್ ಗೌರವ

ಶಿಕ್ಷಣ ಸಮ್ಮೇಳನದಲ್ಲಿ ಶಿಕ್ಷಣದ ಬಗ್ಗೆ ಮಾಹಿತಿ, ಉದ್ಯೋಗ ಪಡೆಯುವ ಬಗ್ಗೆ ಕಾರ್ಯಗಾರ

50ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಉದ್ಯೋಗ ಮೇಳದಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಭಾಗಿ

600 ಮಂದಿ ಉದ್ಯೋಗ ಆಕಾಂಕ್ಷಿಗಳು ಭಾಗಿ, 250 ಮಂದಿಗೆ ಉದ್ಯೋಗ ಸೃಷ್ಟಿ

ಮಲೆನಾಡಿನ ಮಹಿಳಾ ಮತ್ತು ಸ್ಟಾರ್ಟ್ ಅಪ್ ಉದ್ಯಮಿಗಳ ಸಮ್ಮೇಳನದಲ್ಲಿ ಸುಮಾರು 50ಕ್ಕೂ ಹೆಚ್ಚು ಮಲೆನಾಡಿನ ಸ್ಟಾರ್ಟ್ ಅಪ್ ಹಾಗೂ ಮಹಿಳಾ ಉದ್ಯಮಿಗಳಿಗೆ ಗೌರವಿಸಿ ಸನ್ಮಾನ ಮಾಡಲಾಯಿತು. ಈ ಮೂಲಕ ಮಲೆನಾಡಿಗೆ ಮಹಿಳಾ ಮತ್ತು ಸ್ಟಾರ್ಟ್ ಅಪ್ ಸೇವೆಯನ್ನು ನೀಡುವಂತೆ ಮನವಿ ಮಾಡಲಾಯಿತು.

ಮಲೆನಾಡಿನ ವಿವಿಧ ತಾಲೂಕಿನ ಸುಮಾರು 33 ಮಂದಿಗೆ ಮಲ್ನಾಡ್ ಐಕಾನ್ ಅವಾರ್ಡ್ 2024, ಮಲ್ನಾಡ್ ವಿಮೆನ್ ಅಚಿವರ್ ಅವಾರ್ಡ್ – 2024, ಮಲ್ನಾಡ್ ಬಿಸಿನೆಸ್ ಅಚಿವರ್ಸ್  ಅವಾರ್ಡ್ – 2024 ನೀಡಿ ಅವರು ಮಲೆನಾಡಿಗೆ ನೀಡಿದ ಕಾಣಿಕೆ, ಕೊಡುಗೆ, ಸೇವೆ, ಉದ್ಯೋಗ ಸೃಷ್ಟಿಯನ್ನು ಗೌರವಿಸಲಾಯಿತು.

ನೃತ್ಯ ಸ್ಪರ್ಧೆ, ಡ್ಯಾನ್ಸ್ ಸ್ಪರ್ಧೆ ರಂಗು!

ಮಲೆನಾಡಿನ ವಿವಿಧ ತಾಲೂಕಿನ ಪ್ರತಿಭಾವಂತರಿಗಾಗಿ  ನೃತ್ಯ ಸ್ಪರ್ಧೆ, ಡ್ಯಾನ್ಸ್ ಸ್ಪರ್ಧೆ ಮಾಡಿದ್ದು 50ಕ್ಕೂ ಹೆಚ್ಚು ಕಲಾವಿದರು ಭಾಗಿಯಾದರು. ಮ್ಯೂಸಿಕ್ ನೈಟ್, ಡ್ಯಾನ್ಸ್ ಎಕ್ಸ್ಪ್ರೆಸ್, ಕಾಮಿಡಿ ಶೋಗಳ ಮೂಲಕ ಸಾವಿರಾರು ಜನರಿಗೆ ಮನೋರಂಜನೆ ನೀಡಲಾಗಿದ್ದು, ಮಲೆನಾಡಿನಲ್ಲಿ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿ ಹೊರಹೊಮ್ಮಿತು.

ಸ್ಥಳೀಯ 50ಕ್ಕೂ ಹೆಚ್ಚು ಕಲಾವಿದರಿಗೆ ಸಂಗೀತ, ನೃತ್ಯ, ಕಾಮಿಡಿ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಅವಕಾಶವನ್ನು ನೀಡಲಾಯಿತು.

ಮಲೆನಾಡಲ್ಲಿ ಇತಿಹಾಸ ಸೃಷ್ಟಿ

ಮೂರು ದಿನಗಳ ಕಾಲ ನಡೆದ ಈ ಅದ್ದೂರಿ ಕಾರ್ಯಕ್ರಮವು ಮಲೆನಾಡಿನಲ್ಲಿ ಒಂದು ಇತಿಹಾಸವನ್ನು ಸೃಷ್ಟಿಸಿದ್ದು ರಾಜ್ಯಮಟ್ಟದ ಕಾರ್ಯಕ್ರಮವಾಗಿ ಹೊರಹೊಮ್ಮಿತು. ಎಲ್ಲಾ ಕ್ಷೇತ್ರಗಳನ್ನು ಒಳಗೊಂಡಂತೆ ಮಾದರಿ ಕಾರ್ಯಕ್ರಮವಾಗಿದ್ದು  ಭಾಗವಹಿಸಿದ ಎಲ್ಲಾ ಗಣ್ಯರು ಸಾಂಸ್ಕೃತಿಕ ಕ್ಷೇತ್ರದ ಕಲಾವಿದರು ಮೆಚ್ಚುಗೆ ವ್ಯಕ್ತಪಡಿಸಿದರು. ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ, ಕಲೆ, ಉದ್ಯಮ, ಸಹಕಾರಿ, ಕೃಷಿ, ಸಾಮಾಜಿಕ ಕ್ಷೇತ್ರದ ಗಣ್ಯರು ಸದಸ್ಯರು ಭಾಗಿಯಾದರು. ತೀರ್ಥಹಳ್ಳಿ ಸೇರಿದಂತೆ ಮಲೆನಾಡಿನ ಅನೇಕ ಸಂಘಟನೆಗಳು ಸಂಘ ಸಂಸ್ಥೆಗಳು, ಪದಾಧಿಕಾರಿಗಳು  ಭಾಗಿಯಾಗಿದ್ದವು. ಸುಮಾರು 6000 ದಿಂದ 7000 ಜನ ಮೂರು ದಿನದ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಯಕ್ರಮಕ್ಕೆ ಸಹಕರಿಸಿದ ಸರ್ವರಿಗೂ ಧನ್ಯವಾದಗಳು.

ನಮ್ಮೂರ್ ಎಕ್ಸ್ಪ್ರೆಸ್ ಮಲ್ನಾಡೋತ್ಸವದ ಎಲ್ಲಾ ಕಾರ್ಯಕ್ರಮಗಳು ನಮ್ಮೂರ್ ಎಕ್ಸ್ಪ್ರೆಸ್  ಫೇಸ್ಬುಕ್,  ನಮ್ಮೂರ್ ಎಕ್ಸ್ಪ್ರೆಸ್ ಇನ್ಸ್ಟಾಗ್ರಾಮ್, ನಮ್ಮೂರ್ ಎಕ್ಸ್ ಪ್ರೆಸ್ ಯೂಟ್ಯೂಬ್ ನಲ್ಲಿ ಪ್ರಸಾರವಾಗಿದೆ. ಎಲ್ಲಾ ಮಾಹಿತಿಯನ್ನು ನಮ್ಮೂರ್ ಎಕ್ಸ್ಪ್ರೆಸ್ ವೆಬ್ಸೈಟ್ನಲ್ಲಿ ಕೂಡ ಮಲ್ನಾಡೋತ್ಸವ ಎಂಬ ವಿಭಾಗದಲ್ಲಿ ಪ್ರಕಟ ಮಾಡಲಾಗುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 hour ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

3 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

20 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

20 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

22 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago