ಪಹಲ್ಗಾಮ್ ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ತಾಯಿ ಸಿಂದೂರ್ ಆಪರೇಷನ್ ಬಗ್ಗೆ ಹೇಳೀದ್ದೇನು..!??

ತಾಯಂದಿರ ಸಿಂಧೂರ ಉಳಿಸುವ ನಿಟ್ಟಿನಲ್ಲಿ ದಾಳಿ – ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ಪೆಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರ ಮೇಲೆ ಭಾರತ ದೇಶ ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ದಾಳಿ ನಡೆಸಿ 9 ಉಗ್ರರ ತಾಣದ ಮೇಲೆ ದಾಳಿ ನಡೆಸಿರುವುದು ಬಹಳ ಸಂತೋಷ ತಂದಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. 
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾಕ್ ನಲ್ಲಿ ಎಮೆರ್ಜೆನ್ಸಿ ಹೇರಲಾಗಿದೆ. ಭಾರತ ಇಷ್ಟು ಬೇಗ ಪ್ರತಿಕಾರ ಹೇಳುತ್ತೆ ಎಂದು ಅಂದುಕೊಂಡಿರಲಿಲ್ಲ. ಇದೊಂದು ಭಾರತೀಯ ವಾಯುದಳದ ದಿಟ್ಟ ಹೆಜ್ಜೆ ಎಂದು ತಿಳಿಸಿದ್ದಾರೆ. 

ಯುದ್ದಕ್ಕೆ ಪ್ರಚೋದನೆಯನ್ನ ಪಾಕ್ ಮಾಡಿತ್ತು. ಆದರೆ ಪಾಕ್ ನ ಪ್ರಜೆಗಳ ಮೇಲೆ ಆಗಲಿ ಅಥವಾ ಸೇನೆಯ ಮೇಲೆ ದಾಳಿ ನಡೆಸಿಲ್ಲ. ಮಸೀದಿ ಅಥವಾ ನಾಗರೀಕರ ಮೇಲೆ ನಡೆದಿಲ್ಲ. ಉಗ್ರರ ತಾಣದ ಮೇಲೆ ದಾಳಿ ನಡೆದಿದೆ. ಇದು ಗಮನಿಸಬೇಕಾದ ವಿಷಯವಾಗಿದೆ. ಕಳೆದ ಎರಡು ಮೂರು ವರ್ಷದಿಂದ ಚರ್ಚೆ ನಡೆದಿತ್ತು ಆದರೆ ಪಿಒಕೆಯನ್ನ ವಶಪಡಿಸಿಕೊಳ್ಳಲು ಇದು ಸದಾವಕಾಶವಾಗಿದೆ ಎಂದರು.

ಹಿಂದೂಗಳ ತಾಯಂದಿರ ಮೇಲೆ ಸಿಂಧೂರ ಇಡುವ ಹೆಸರಿನಲ್ಲಿ ಆಪರೇಷನ್ ಸಿಂಧೂರ ಎಂದು ಹೆಸರಿಸಲಾಗಿದೆ. ತಾಯಂದಿರ ಸಿಂಧೂರ ಉಳಿಸುವ ಚಿಂತನೆಯನ್ನ ಇಟ್ಟುಕೊಂಡು ದಾಳಿ ನಡೆಸಲಾಗಿದೆ.  ರಕ್ಷಣೆ ವಿಚಾರದಲ್ಲಿ ಎಲ್ಲರೂ ಪ್ರಧಾನಿ ಮತ್ತು ದೇಶದ ಜೊತೆ ಇರುವಂತೆ ಮನವಿ ಮಾಡಿದರು.

ಪಹಲ್ಗಾಮ್ ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ತಾಯಿ ಸಿಂದೂರ್ ಆಪರೇಷನ್ ಬಗ್ಗೆ ಹೇಳೀದ್ದೇನು..!??

ಶಿವಮೊಗ್ಗ: ಪಹಲ್ಗಾಮ್‌ ದಾಳಿಗೆ ಪ್ರತ್ಯುತ್ತರವಾಗಿ ಭಾರತ ತಡ ರಾತ್ರಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಆಪರೇಷನ್‌ ಸಿಂಧೂರ  ಹೆಸರಿನಲ್ಲಿ ನಡೆದ ದಾಳಿಗೆ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ಶಿವಮೊಗ್ಗ ಜನತೆ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನು ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್ ರಾವ್‌ ಅವರ ತಾಯಿ ಸುಮತಿ ಮಾಧ್ಯಮಗಳ ಜೊತೆಗೆ ಮಾತನಾಡಿ ಕುಟುಂಬದಲ್ಲಿ ಯಜಮಾನ ಯಾವುದೇ ತೀರ್ಮಾನ ಕೈಗೊಂಡರು ನಾವೆಲ್ಲ ಬದ್ಧರಾಗಿರುತ್ತೇವೆ. ಹಾಗೆಯೆ ನಮ್ಮ ದೇಶವನ್ನು ಕುಟುಂಬ ಎಂದು ಪರಿಗಣಿಸಿದರೆ ಮೋದಿ ಅವರು ಯಜಮಾನನ ಸ್ಥಾನದಲ್ಲಿದ್ದಾರೆ. ಅವರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಹೊರ ದೇಶಕ್ಕೆಲ್ಲ ಆರಾಮವಾಗಿ ಹೋಗಿ ಬರುತ್ತಾರೆ. ಆದರೆ ನಮ್ಮದೇ ದೇಶದಲ್ಲಿ ನಾವು ಓಡಾಡಲು ಸಾಧ್ಯವಾಗುತ್ತಿಲ್ಲವಲ್ಲ ಎಂದು ಅನಿಸುತ್ತಿತ್ತು. ನನ್ನ ಮಗ ಪ್ರಕೃತಿ ಸೌಂದರ್ಯ ನೋಡಿ ಬರಲು ಹೋಗಿದ್ದವನು. ಮಲೆನಾಡಿನಲ್ಲಿ ಹುಟ್ಟಿದವನು ಅಲ್ಲಿ ಹೋಗಿ ಅನಾಥವಾಗಿ ಸಾವನ್ನಪ್ಪಿದ್ದ. ಇದು ನನಗೆ ಬಹಳ ನೋವಿದೆ. ಮೋದಿ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಇನ್ನು ಮಂಗಳವಾರ ಸಂಜೆ ಎನ್‌ಐಎ ಅಧಿಕಾರಿಗಳು ಬಂದಿದ್ದರು. ಸರ್ಕಾರದ ಕಡೆಯಿಂದ ಎಂದು ತಿಳಿಸಿದ್ದರು. ಏನೆಲ್ಲಾ ಪ್ರಶ್ನೆಗಳನ್ನು ಕೇಳಿದರು ನಾವು ಉತ್ತರ ನೀಡಿದ್ದೇವೆ ಎಂದು ತಿಳಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

5 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

6 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

7 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago