ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ

ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶ ಇಲ್ಲದೆ, ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ.

ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ. ಎನ್ನುವವರ ಆಯ್ಕೆಯನ್ನು ಕೋರ್ಟ್‌ ಮರುಸ್ಥಾಪಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಈ ತೀರ್ಮಾನ ಪ್ರಕಟಿಸಿದೆ.

ರಸ್ತೆಯ ಬದಿಯಲ್ಲಿ ಕೆಲವರ ಜೊತೆಯಾಗಿ ಇಸ್ಪೀಟು ಆಡುತ್ತಿದ್ದ ಹನುಮಂತರಾಯಪ್ಪ ಅವರಿಗೆ ಯಾವುದೇ ವಿಚಾರಣೆ ನಡೆಸದೆ ₹200 ದಂಡ ವಿಧಿಸಲಾಗಿತ್ತು.

ಹನುಮಂತರಾಯಪ್ಪ ಅವರು ಜೂಜಾಡುವ ಅಭ್ಯಾಸ ಬೆಳೆಸಿಕೊಂಡ ವ್ಯಕ್ತಿ ಅಲ್ಲ ಎಂದು ಪೀಠವು ಹೇಳಿದೆ. ‘ಇಸ್ಪೀಟು ಆಟದಲ್ಲಿ ಹಲವು ಬಗೆಗಳಿವೆ. ಆದರೆ, ಅಂತಹ ಪ್ರತಿಯೊಂದು ಬಗೆಯೂ, ಅದರಲ್ಲೂ ಮುಖ್ಯವಾಗಿ ಮನರಂಜನೆಗಾಗಿ ಹಾಗೂ ವಿನೋದಕ್ಕಾಗಿ ಆಡುವುದು, ನೈತಿಕವಾದ ಅಧಃಪತನಕ್ಕೆ ಒಯ್ಯುವಂಥದ್ದು ಎಂಬುದನ್ನು ಒಪ್ಪಿಕೊಳ್ಳುವುದು ಕಷ್ಟ. ವಾಸ್ತವದಲ್ಲಿ, ನಮ್ಮ ದೇಶದ ಹಲವು ಕಡೆಗಳಲ್ಲಿ ಜೂಜು ಅಥವಾ ಬೆಟ್ಟಿಂಗ್‌ನ ಲವಲೇಶವೂ ಇಲ್ಲದೆ ಇಸ್ಪೀಟು ಆಡುವುದು ಬಡವರ ಮನರಂಜನಾ ಮಾರ್ಗ ಎಂದು ಒಪ್ಪಿತವಾಗಿದೆ’ ಎಂದು ಹೇಳಿದೆ.

ಹನುಮಂತರಾಯಪ್ಪ ಅವರು ಅತಿಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದರು, ಅವರ ಆಯ್ಕೆಯನ್ನು ರದ್ದುಪಡಿಸಿರುವುದು ಅವರು ಮಾಡಿದ್ದಾರೆ ಎನ್ನಲಾದ ತಪ್ಪಿಗೆ ಹೋಲಿಸಿದರೆ ಬಹಳ ಹೆಚ್ಚಿನ ಶಿಕ್ಷೆ ಎಂದು ಕೋರ್ಟ್ ಹೇಳಿದೆ.

ಹನುಮಂತರಾಯಪ್ಪ ಅವರು ಜೂಜಿನ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದರು ಎಂದು ಚುನಾವಣೆಯಲ್ಲಿ ಹನುಮಂತರಾಯಪ್ಪ ವಿರುದ್ಧ ಸೋತಿದ್ದ ರಂಗನಾಥ ಬಿ. ಎನ್ನುವವರು ಸಹಕಾರ ಸಂಘಗಳ ಜಂಟಿ ನಿಬಂಧಕರಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ನೈತಿಕ ಅಧಃಪತನದ ತಪ್ಪಿನಲ್ಲಿ ಹನುಮಂತರಾಯಪ್ಪ ಭಾಗಿಯಾಗಿದ್ದಾರೆ ಎಂಬ ಕಾರಣ ನೀಡಿ ಹನುಮಂತರಾಯಪ್ಪ ಅವರ ಆಯ್ಕೆಯನ್ನು ರದ್ದುಪಡಿಸಲಾಗಿತ್ತು. ಆಯ್ಕೆ ರದ್ದುಪಡಿಸಿದ ಕ್ರಮವನ್ನು ಹೈಕೋರ್ಟ್‌ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಹನುಮಂತರಾಯಪ್ಪ ಅವರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

8 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

21 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

23 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 day ago