ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು

ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು

ಗಳೂರು, ಮೇ 28: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ, ಎರಡು ದಿನಗಳ ಹಿಂದೆ ಸುರಿದ ಮಳೆ ಮಹಾನಗರ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿತ್ತು.

ರಸ್ತೆಗಳ ಮೇಲೆ ನೀರು ನಿಂತಿತ್ತು. ವಾಹನ ಸವಾರರು ಪರದಾಡಿದ್ದರು. ಮನೆಯೊಳಗೆ ನೀರು ನುಗ್ಗಿತ್ತು. ಮನೆಗಳ ಮುಂದೆ ನಿಲ್ಲಿಸಿದ್ದ ಕಾರು, ಬೈಕ್​ ಸೇರಿದಂತೆ ಹಲವು ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದ್ದವು. ವಾಹನಗಳಿಗೆ ಹಾನಿಯಗಿದ್ದು, ಮಾಲೀಕರಿಗೆ ಸಾಕಷ್ಟು ನಷ್ಟವಾಗಿದೆ. ಇದರಿಂದ ವಾಹನಗಳು ತಮ್ಮ ಅಸಲಿ ಮೌಲ್ಯವನ್ನು ಕಳೆದುಕೊಂಡಿವೆ. ಹೀಗಾಗಿ, ಮಾಲೀಕರು ತಮ್ಮ ಕಾರುಗಳನ್ನು ಅರ್ಧ ರೇಟ್​ಗೆ ಮಾರಲು ಮುಂದಾಗಿದ್ದಾರೆ.

ಕಳೆದ ವರ್ಷ ವರುಣಾರ್ಭಟಕ್ಕೆ ಯಲಹಂಕದ ಕೇಂದ್ರಿಯ ಅಪಾರ್ಟ್ಮೆಂಟ್ ಅಕ್ಷರಶಃ ನಲುಗಿ ಹೋಗಿತ್ತು. 2500 ಜನರನ್ನು ಅಪಾರ್ಟ್ಮೆಂಟ್​ನಿಂದ ಶಿಫ್ಟ್ ಮಾಡಲಾಗಿತ್ತು. 300ಕ್ಕೂ ಅಧಿಕ ಕಾರುಗಳು ಮುಳುಗಡೆಯಾಗಿದ್ದವು. ಹೀಗೆ ಮುಳುಗಡೆಯಾಗಿ ಕೆಟ್ಟು ಹೋದ ಕಾರುಗಳಿಗೆ ವಿಮೆ ಕೂಡ ಕ್ಲೈಂ ಆಗಲ್ವಂತೆ.

ಉದಯ ಎಂಬುವರ ಹನ್ನೆರಡುವರೆ ಲಕ್ಷ ಮೌಲ್ಯದ ಬೊಲೆರೊ ಕಂಪನಿಯ ಕಾರು ನೀರಲ್ಲಿ ಮುಳುಗಿತ್ತು. ಇದರಿಂದ ಕಾರಿಗೆ ಸಾಕಷ್ಟು ಹಾನಿಯಾದ ಕಾರಣ ಉದಯ ಅವರು ಅದನ್ನು 6.80 ಲಕ್ಷ ರೂ.ಗೆ ಮಾರಾಟ ಮಾಡಿದ್ದಾರೆ. ಇನ್ನು, 10 ಸಾವಿರ ಕಿಮಿ ಓಡಿದ್ದ ಮಾರುತಿ ಝನ್ ಕಾರನ್ನು ಕೃಷ್ಣ ಎಂಬುವರು 70 ಸಾವಿರ ರೂ.ಗೆ ಮಾರಾಟ ಮಾಡಿದ್ದಾರೆ. 18-20 ಲಕ್ಷ ರೂ. ಮೌಲ್ಯದ ಹೋಂಡಾ ಸಿಟಿ ಕಾರು ಮಳೆ ನೀರಲ್ಲಿ ಮುಳುಗಡೆಯಾದ ಕಾರಣ, ಮಾಲೀಕ ಸುನಿಲ್ ಅವರು ಅನಿವಾರ್ಯವಾಗಿ 7 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ‌.

ಮೊನ್ನೆ ಸುರಿದ ಮುಂಗಾರು ಮಳೆಗೆ ಸಾಯಿ ಲೇಔಟ್, ಕೋರಮಂಗಲ, ಬಿಟಿಎಂ ಲೇಔಟ್, ಹೆಚ್ ಬಿ ಆರ್ ಲೇಔಟ್ ಅಪಾರ್ಟ್ಮೆಂಟ್​ಗಳಲ್ಲಿ ಪಾರ್ಕ್​ ಮಾಡಿದ್ದ ಕಾರುಗಳು ಮುಳುಗಡೆಯಾಗಿದ್ದವು. ಅಪಾರ್ಟ್ಮೆಂಟ್ ಬೇಸ್ಮೆಂಟ್ ಮತ್ತು ರಸ್ತೆ ಬದಿ ನಿಲ್ಲಿಸಿದ್ದ ಕಾರುಗಳಿಗೆ ಜಲದಿಗ್ಭಂಧನ ಎದುರಾಗಿತ್ತು‌. ಇದೀಗ, ಅಂತಹ ಕಾರುಗಳನ್ನು ಕೂಡ ಕೆಲ ಮಾಲೀಕರು ಅರ್ಧ ಬೆಲೆಗೆ ಮಾರಾಟ ಮಾಡಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಪ್ರತಿ ವರ್ಷ ಮಳೆ ಬಂದಾಗಲೂ ಬೆಂಗಳೂರಿನ ಜನರಿಗೆ ಒಂದಲ್ಲಾ ಒಂದು ಸಂಕಷ್ಟು ಎದುರಾಗುತ್ತವೆ. ಮಳೆಯಿಂದ ಆಗುತ್ತಿರುವ ತೊಂದರೆಗಳನ್ನು ಶಾಶ್ವತವಾಗಿ ತಡೆಯಿರಿ ಎಂದು ಜನರು ಅದೆಷ್ಟು ಬಾರಿ ಮನವಿ ಮಾಡಿಕೊಂಡರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮಾತ್ರ ಇನ್ನೂವರೆಗೂ ಎಚ್ಚೆತ್ತುಕೊಂಡಂತೆ ಕಾಣಿಸುತ್ತಿಲ್ಲ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

2 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

3 hours ago

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…

3 hours ago

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

20 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

24 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

24 hours ago