ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ..
ರಾಕೇಶ್ ಪೂಜಾರಿ ಅವರು ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಅವರ ಹಾಸ್ಯ, ಸಹಜತೆ, ಮತ್ತು ಜನರನ್ನು ನಗಿಸುವ ವಿಶಿಷ್ಟ ಶೈಲಿಯಿಂದಾಗಿ ಎಲ್ಲರ ಮನಗೆದ್ದಿದ್ದರು. ಕಾರ್ಯಕ್ರಮದ ಸೀಸನ್-3ರಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ವಿಜೇತರಾಗಿ ಹೊರಹೊಮ್ಮಿದ್ದ ರಾಕೇಶ್, ಕಿರುತೆರೆಯ ಜೊತೆಗೆ ತುಳು ರಂಗಭೂಮಿಯಲ್ಲೂ ತಮ್ಮದೇ ಛಾಪು ಮೂಡಿಸಿದ್ದರು.
ರಾಕೇಶ್ ಅವರ ಆಪ್ತರ ಪ್ರಕಾರ, ಅವರು ಆರೋಗ್ಯವಾಗಿದ್ದರು ಮತ್ತು ಯಾವುದೇ ಗಂಭೀರ ಅನಾರೋಗ್ಯದಿಂದ ಬಳಲುತ್ತಿರಲಿಲ್ಲ. ದಿನಾಂಕ 11 ಮೇ 2025ರಂದು ತಮ್ಮ ಊರಿನಲ್ಲಿ ನಡೆದ ಮದುವೆಯ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಾಕೇಶ್, ಎಂದಿನಂತೆ ತಮ್ಮ ಉತ್ಸಾಹದಿಂದ ಡ್ಯಾನ್ಸ್ ಮಾಡಿ, ಎಲ್ಲರ ಜೊತೆ ಸಂತೋಷದ ಕ್ಷಣಗಳನ್ನು ಕಳೆದಿದ್ದರು. ಆದರೆ, ಕಾರ್ಯಕ್ರಮದ ಬಳಿಕ ರಾಕೇಶ್ ಅವರಿಗೆ ಆಕಸ್ಮಿಕವಾಗಿ ರಕ್ತದೊತ್ತಡ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು ಎಂದು ವೈದ್ಯರು ದೃಢಪಡಿಸಿದ್ದಾರೆ.
ಕಾಮಿಡಿ ಕಿಲಾಡಿ ಕಾರ್ಯಕ್ರಮದ ನಿರ್ಣಾಯಕರಾಗಿದ್ದ ನಟಿ ರಕ್ಷಿತಾ ಪ್ರೇಮ್ ಅವರು ರಾಕೇಶ್ ಅವರ ನಿಧನಕ್ಕೆ ಭಾವುಕವಾಗಿ ಸ್ಪಂದಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಕ್ಷಿತಾ ಬರೆದುಕೊಂಡಿದ್ದಾರೆ. ‘ಮಗನೇ, ನಿನ್ನನ್ನು ತುಂಬಾ ಮಿಸ್ ಮಾಡುತ್ತೇನೆ. ಕಾಮಿಡಿ ಕಿಲಾಡಿ ನನಗೆ ಹೃದಯಕ್ಕೆ ತುಂಬಾ ಹತ್ತಿರವಾದ ಕಾರ್ಯಕ್ರಮ. ನೀನು ಅದರ ಒಂದು ಶಕ್ತಿಯಾಗಿದ್ದೆ. ನಿನ್ನಂತಹ ಅದ್ಭುತ ವ್ಯಕ್ತಿಯ ಆತ್ಮ ಶಾಂತಿಗಾಗಿ ಪ್ರಾರ್ಥಿಸುತ್ತೇನೆ.’ ರಕ್ಷಿತಾ ಭಾವುಕರಾಗಿ ಬರೆದುಕೊಂಡಿದ್ದಾರೆ.
ರಾಕೇಶ್ ಪೂಜಾರಿ ಅವರ ಸಾವಿನ ಸುದ್ದಿಯಿಂದ ಕಿರುತೆರೆಯ ಕಲಾವಿದರು, ತುಳು ರಂಗಭೂಮಿಯ ಸಹ ಕಲಾವಿದರು, ಮತ್ತು ಅವರ ಅಭಿಮಾನಿಗಳು ದಿಗ್ಭ್ರಮೆಗೊಂಡಿದ್ದಾರೆ.
ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿತ್ತು.
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…