ರಿಪ್ಪನ್ಪೇಟೆಯ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್ಐ ಯಾರು ಗೊತ್ತಾ..??ಈ ಸುದ್ದಿ ನೋಡಿ
ರಿಪ್ಪನ್ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ಯವರನ್ನು ತತ್ತಕ್ಷಣ ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪಿಎಸೈ 2 ಆಗಿ ಕಾರ್ಯ ನಿರ್ವಹಿಸುತ್ತಿರುವ ಟಿ ಎಂ ನಾಗರಾಜ್ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.

ಕಳೆದ ಎರಡೂವರೆ ವರ್ಷದಿಂದ ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ಪ್ರವೀಣ್ ಎಸ್ ಪಿ ವರ್ಗಾವಣೆಯಾಗಿದ್ದಾರೆ.