ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ
ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ
ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ
ಪಾಕಿಸ್ಥಾನದ ಬೆಂಬಲಿತ ಉಗ್ರರನ್ನು ಭಾರತೀಯ ಸೇನೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಿರ್ನಾಮ ಮಾಡಿದ ಭಾರತೀಯ ಸೇನೆಗೆ ನೈತಿಕ ಬೆಂಬಲ ವ್ಯಕ್ತಪಡಿಸಿ ನಾಗರಿಕ ವೇದಿಕೆ ವತಿಯಿಂದ ಸಾಗರದಲ್ಲಿ ಹಮ್ಮಿಕೊಂಡಿದ್ದ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ ಸುರಿಯುತ್ತಿದ್ದ ಮಳೆ ಯಲ್ಲಿಯೂ ಯಶಸ್ವಿ ಯಾಯಿತು.
ಸೋಮವಾರ ಸಂಜೆ ೫-೩೦ ಕ್ಕೆ ಸಾಗರದ ಗಣಪತಿ ದೇವಸ್ಥಾನದಿಂದ ಬೃಹತ್ ವಿಜಯ ತಿರಂಗಾ ಯಾತ್ರೆ ಆರಂಭಗೊಂಡಿತು.ಒಂದು ಕಿ.ಮೀ ಉದ್ದದ ತಿರಂಗಾ ಹೊತ್ತುಕೊಂಡು ಸಾಗುತ್ತಿರುವ ಜೊತೆಗೆ ಒಂದೇ ಮಾತರಂ ಎಂಬ ಘೋಷಣೆ ಆಕರ್ಷಕ ಹಾಗೂ ಸ್ಪೂರ್ತಿದಾಯಕವಾಗಿತ್ತು.
ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿರಂಗಾ ಹೊತ್ತು ಸಾಗಿದರೇ ಎಡಭಾಗದಲ್ಲಿ ಮಾಜಿ ಸಚಿವ ಹೆಚ್.ಹಾಲಪ್ಪ ನವರು ತಿರಂಗಾ ಹೊತ್ತು ಸಾಗಿದರು.ಸುಮಾರು ೨ಸಾವಿರಕ್ಕೂ ಹೆಚ್ಚು ಜನರು ತಿರಂಗಾ ಹೊತ್ತು ಸಾಗುತ್ತಿ ರುವ ದೃರ್ಶ್ಯ ಅವಿಸ್ಮರಣೀಯವಾಗಿತ್ತು.
ಸಾಗರದಲ್ಲಿನ ಸೈನಿಕರು ಮತ್ತು ಮಾಜಿ ಸೈನಿಕರು ಬೃಹತ್ ವಿಜಯ ತಿರಂಗಾ ಯಾತ್ರೆ ಯಲ್ಲಿ ಹೆಮ್ಮೆಯಿಂದ ಹೆಜ್ಜೆ ಹಾಕಿದರು.ಎನ್ಸಿಸಿ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ವಿಜಯ ತಿರಂಗಾ ಯಾತ್ರೆ ಯಲ್ಲಿ ಆಕರ್ಷಕ ಹೆಜ್ಜೆ ಹಾಕಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್