ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ
ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿ ಹಾಗೂ ಸ್ಥಳೀಯರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಮಂಗಳೂರಿನ ಪೊಲೀಸರು ಕೂಡ ಇದೇ ವಿಡಿಯೋಗಳನ್ನು ಆಧರಿಸಿ ಆರೋಪಿಗಳ ಬೆನ್ನುಬಿದ್ದಿದ್ದರು.
ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ ಪೊಲೀಸರು, ಎಂಟು ಮಂದಿಯ ಹೆಡೆಮುರಿ ಕಟ್ಟಿದ್ದಾರೆ. ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಝಮಿಲ್, ಕಲಂದರ್ ಶಾಫಿ, ಮೊಹಮ್ಮದ್ ರಿಜ್ವಾನ್, ರಂಜಿತ್ ಹಾಗೂ ನಾಗರಾಜ್ನನ್ನ ಬಂಧಿಸಿದ್ದಾರೆ. ಈ ವೇಳೆ ಸುಹಾಸ್ ಕೊಲೆಯಲ್ಲಿ ಒಂಬತ್ತು ಜನ ಶಾಮೀಲಾಗಿರುವುದು ಗೊತ್ತಾಗಿದೆ.
ಚೂರಿ ಇರಿತಕ್ಕೆ ಪ್ರತೀಕಾರ ತೀರಿಸಿಕೊಂಡಿತಾ ಸಫ್ವಾನ್ ಗ್ಯಾಂಗ್?
ತನಿಖೆ ಆರಂಭಿಸಿದ ಪೊಲೀಸರಿಗೆ 2023ರ ಪ್ರಕರಣವೊಂದರ ಲಿಂಕ್ ಇರುವುದು ಗೊತ್ತಾಗಿತ್ತು. ಅದುವೇ ಸಫ್ವಾನ್ ಹಾಗೂ ಸುಹಾಸ್ ಶೆಟ್ಟಿಯ ಆಪ್ತನ ನಡುವಿನ ಗಲಾಟೆ. ಸಫ್ವಾನ್ ಎಂಬಾತನ ಜತೆಗೆ ಸುಹಾಸ್ ಶೆಟ್ಟಿ ಆಪ್ತ ಪ್ರಶಾಂತ್ ಗಲಾಟೆ ಮಾಡಿಕೊಂಡಿದ್ದ. ಗಲಾಟೆ ವಿಚಾರಕ್ಕೆ ಮಾತುಕತೆ ನಡೆಸೋದಕ್ಕೆ ಸಫ್ವಾನ್ನನ್ನು ಕರೆದಿದ್ದ. ಮಾತಾನಾಡುವುದಕ್ಕೆ ಎಂದು ಕರೆದ ಪ್ರಶಾಂತ್ ಹಾಗೂ ಗ್ಯಾಂಗ್ 2023ರ ಸೆಪ್ಟೆಂಬರ್ನಲ್ಲಿ ಸಫ್ವಾನ್ಗೆ ಡ್ರ್ಯಾಗನರ್ನಿಂದ ಇರಿದಿತ್ತು. ಬಳಿಕ ಚೂರಿ ಇರಿತಕ್ಕೆ ಒಳಗಾದ ಸಫ್ವಾನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ಚೂರಿ ಇರಿತ ಪ್ರಕರಣ ಬಳಿಕ ಸಫ್ವಾನ್ ಹಾಗೂ ಪ್ರಶಾಂತ್ ನಡುವೆ ದ್ವೇಷ ಹುಟ್ಟಿಸಿತ್ತು.
ಪ್ರಶಾಂತ್ ಬದಲು ಸುಹಾಸ್ ಹತ್ಯೆ!
ಹಲ್ಲೆಗೆ ಪ್ರತಿಯಾಗಿ ಪ್ರಶಾಂತ್ ಮೇಲೆ ದಾಳಿ ಮಾಡುವುದಕ್ಕೆ ಸಫ್ವಾನ್ ಅನೇಕ ಬಾರಿ ಸಂಚು ಹೂಡಿದ್ದ. ಈ ವೇಳೆ ಪ್ರಶಾಂತ್ಗೆ ಬೆಂಬಲವಾಗಿ ನಿಂತಿದ್ದು ಸುಹಾಸ್ ಶೆಟ್ಟಿ. ಇದೇ ವಿಚಾರಕ್ಕೆ ಪ್ರಶಾಂತ್ ಮೇಲಿನ ಸಫ್ವಾನ್ ಸಂಘರ್ಷ, ಸುಹಾಸ್ ಶೆಟ್ಟಿ ಕಡೆಗೆ ತಿರುಗಿತ್ತು. ಹೀಗಾಗಿಯೇ ಪ್ರಶಾಂತ್ನನ್ನು ಬಿಟ್ಟ ಸಫ್ವಾನ್, ಸುಹಾಸ್ ಹತ್ಯೆಗೆ ಸ್ಕೆಚ್ ಹಾಕಿದ್ದ. ಒಂದಷ್ಟು ಕ್ರಿಮಿನಲ್ಗಗಳ ಜೊತೆಸೇರಿ ಸಂಚು ರೂಪಿಸಿದ್ದ. ಅದರಂತೆ ಮಿನಿ ಕಂಟೇನರ್ ಚಲಾಯಿಸಿದ್ದ ಸಫ್ವಾನ್ ಸುಹಾಸ್ ಕಾರಿಗೆ ಗುದ್ದಿದ್ದ. ಬಲಿಕ ಮುಝಮ್ಮಿಲ್ ಎಂಬಾತ ಚಲಾಯಿಸಿಕೊಂಡು ಬಂದ ಸ್ವಿಫ್ಟ್ ಕಾರಿನಲ್ಲಿದ್ದ ಹಂತಕರು, ನಟ್ಟ ನಡುರಸ್ತೆಯಲ್ಲೇ ಸುಹಾಸ್ನನ್ನು ಕೊಲೆ ಮಾಡಿದ್ದರು.
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು
ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣದಲ್ಲಿ ಬಂಧಕ್ಕೊಳಗಾಗಿರುವ ಆರೋಪಿಗಳಿಗೆ ಕ್ರಿಮಿನಲ್ ಹಿನ್ನೆಲೆ ಇದೆ.
ಯಾರು ಈ ಸಫ್ವಾನ್?
ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಫ್ವಾನ್, ಮಂಗಳೂರಿನ ಬಳಿಯ ಶಾಂತಿಗುಡ್ಡೆ ಪೇಜಾವರ ಗ್ರಾಮದವನು. ಅಬ್ದುಲ್ ನಾಸಿರ್ ಎಂಬುವವರ ಮಗನಾದ ಈತ ಚಾಲಕನಾಗಿ ಕೆಲಸ ಮಾಡುತ್ತಿದ್ದ.
ಯಾರು ಈ ನಿಯಾಜ್?
ಮೇಸ್ತ್ರಿ ಕೆಲಸ ಮಾಡುತ್ತಿರುವ ನಿಯಾಜ್ ಕೂಡ ಕೊಲೆಯಲ್ಲಿ ಶಾಮೀಲಾಗಿದ್ದಾನೆ. ಈತ ಮಂಗಳೂರಿನ ಬಜ್ಪೆ ಶಾಂತಿಗುಡ್ಡೆ ಮಸೀದಿ ಬಳಿ ವಾಸ್ತವ್ಯವಿದ್ದಾನೆ.
ಮುಝಮಿಲ್ ಯಾರು?
ಮಂಗಳೂರಿನ ಮೊಹಮ್ಮದ್ ಮುಝಮಿಲ್ 4 ತಿಂಗಳ ಹಿಂದೆ ಸೌದಿ ಅರೇಬಿಯಾದಿಂದ ಬಂದಿದ್ದ. ನವ ವಿವಾಹಿತನಾಗಿರುವ ಈತ ಕೂಡ ಕೊಲೆಯಲ್ಲಿ ಶಾಮೀಲಾಗಿದ್ದಾನೆ. ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಒಂದು ಪ್ರಕರಣ ಕೂಡ ಇದೆ.
ಯಾರು ಈ ಕಲಂದರ್ ಶಾಫಿ?
ಮಂಗಳೂರಿನ ಕುರ್ಸು ಗುಡ್ಡೆ ಕಳವಾರಿನ ಕಲಂದರ್ ಶಾಫಿ ಕೂಡ ಪ್ರಕರಣದಲ್ಲಿ ಶಾಮೀಲಾಗಿದ್ದಾನೆ. ಈ ಕಲಂದರ್ ಶಾಫಿ ಬೆಂಗಳೂರಿನಲ್ಲಿ ಸೇಲಸ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಈತನ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಯಾರು ಮೊಹಮ್ಮದ್ ರಿಜ್ವಾನ್?
ಇನ್ನು ಕೊಲೆಯಲ್ಲಿ ಮೊಹಮ್ಮದ್ ರಿಜ್ವಾನ್ ಕೈವಾಡವೂ ಇದೆ. ಈತ ಮಂಗಳೂರಿನ ಜೋಕಟ್ಟೆಯ ಈದ್ಗಾ ಮಸೀದಿ ಹತ್ತಿರ ವಾಸವಿದ್ದಾನೆ. ಸೌದಿ ಅರೇಬಿಯಾ ಆಯಿಲ್ ಪ್ಲಾಂಟ್ನಲ್ಲಿ ಕೆಲಸ ಮಾಡುತ್ತಿದ್ದ.
ಸುಹಾಸ್ ಕೊಲೆಯಲ್ಲಿ ಇಬ್ಬರು ಹಿಂದೂ ಯುವಕರು!
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕೇವಲ ಮುಸ್ಲಿಮರು ಅಷ್ಟೇ ಅಲ್ಲ, ಬ್ಬರು ಹಿಂದೂ ಯುವಕರು ಕೂಡ ಶಾಮೀಲಾಗಿದ್ದಾರೆ. ಆ ಪೈಕಿ ಮೊದಲನೆಯವನು ರಂಜಿತ್. ಮತ್ತೊಬ್ಬ ನಾಗರಾಜ್.
ಯಾರು ಈ ರಂಜಿತ್?
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ರುದ್ರ ಪಾದದ ರಂಜಿತ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸುಹಾಸ್ ಮೇಲೆ ದಾಳಿ ಮಾಡಲು ಈತನೇ ಲಾಂಗ್ ತಂದುಕೊಟ್ಟಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.
ಯಾರು ಈ ನಾಗರಾಜ್?
ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಮಾವಿನಕೆರೆ ನಿವಾಸಿ.
ಸದ್ಯ ಸುಹಾಸ್ ಹತ್ಯೆಯ ನೈಜ ಕಾರಣ ಖಾಕಿ ತನಿಖೆಯಲ್ಲಿ ಹೊರಬಿದ್ದಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಮತ್ತಷ್ಟು ವಿಚಾರಗಳನ್ನು ಬಯಲಿಗೆಳೆಯಲು ತನಿಖೆ ಮುಂದುವರಿಸಿದ್ದಾರೆ.
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…