ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ

ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿ ಹಾಗೂ ಸ್ಥಳೀಯರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಮಂಗಳೂರಿನ ಪೊಲೀಸರು ಕೂಡ ಇದೇ ವಿಡಿಯೋಗಳನ್ನು ಆಧರಿಸಿ ಆರೋಪಿಗಳ ಬೆನ್ನುಬಿದ್ದಿದ್ದರು.

ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ ಪೊಲೀಸರು, ಎಂಟು ಮಂದಿಯ ಹೆಡೆಮುರಿ ಕಟ್ಟಿದ್ದಾರೆ. ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಝಮಿಲ್, ಕಲಂದರ್ ಶಾಫಿ, ಮೊಹಮ್ಮದ್ ರಿಜ್ವಾನ್, ರಂಜಿತ್ ಹಾಗೂ ನಾಗರಾಜ್​ನನ್ನ ಬಂಧಿಸಿದ್ದಾರೆ. ಈ ವೇಳೆ ಸುಹಾಸ್ ಕೊಲೆಯಲ್ಲಿ ಒಂಬತ್ತು ಜನ ಶಾಮೀಲಾಗಿರುವುದು ಗೊತ್ತಾಗಿದೆ.

ಚೂರಿ ಇರಿತಕ್ಕೆ ಪ್ರತೀಕಾರ ತೀರಿಸಿಕೊಂಡಿತಾ ಸಫ್ವಾನ್ ಗ್ಯಾಂಗ್?

ತನಿಖೆ ಆರಂಭಿಸಿದ ಪೊಲೀಸರಿಗೆ 2023ರ ಪ್ರಕರಣವೊಂದರ ಲಿಂಕ್ ಇರುವುದು ಗೊತ್ತಾಗಿತ್ತು. ಅದುವೇ ಸಫ್ವಾನ್ ಹಾಗೂ ಸುಹಾಸ್ ಶೆಟ್ಟಿಯ ಆಪ್ತನ ನಡುವಿನ ಗಲಾಟೆ. ಸಫ್ವಾನ್ ಎಂಬಾತನ ಜತೆಗೆ ಸುಹಾಸ್ ಶೆಟ್ಟಿ ಆಪ್ತ ಪ್ರಶಾಂತ್ ಗಲಾಟೆ ಮಾಡಿಕೊಂಡಿದ್ದ. ಗಲಾಟೆ ವಿಚಾರಕ್ಕೆ ಮಾತುಕತೆ ನಡೆಸೋದಕ್ಕೆ ಸಫ್ವಾನ್​ನನ್ನು ಕರೆದಿದ್ದ. ಮಾತಾನಾಡುವುದಕ್ಕೆ ಎಂದು ಕರೆದ ಪ್ರಶಾಂತ್ ಹಾಗೂ ಗ್ಯಾಂಗ್ 2023ರ ಸೆಪ್ಟೆಂಬರ್​​ನಲ್ಲಿ ಸಫ್ವಾನ್​ಗೆ ಡ್ರ್ಯಾಗನರ್​ನಿಂದ ಇರಿದಿತ್ತು. ಬಳಿಕ ಚೂರಿ ಇರಿತಕ್ಕೆ ಒಳಗಾದ ಸಫ್ವಾನ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ಚೂರಿ ಇರಿತ ಪ್ರಕರಣ ಬಳಿಕ ಸಫ್ವಾನ್ ಹಾಗೂ ಪ್ರಶಾಂತ್ ನಡುವೆ ದ್ವೇಷ ಹುಟ್ಟಿಸಿತ್ತು.

ಪ್ರಶಾಂತ್ ಬದಲು ಸುಹಾಸ್ ಹತ್ಯೆ!

ಹಲ್ಲೆಗೆ ಪ್ರತಿಯಾಗಿ ಪ್ರಶಾಂತ್​ ಮೇಲೆ ದಾಳಿ ಮಾಡುವುದಕ್ಕೆ ಸಫ್ವಾನ್ ಅನೇಕ ಬಾರಿ ಸಂಚು ಹೂಡಿದ್ದ. ಈ ವೇಳೆ ಪ್ರಶಾಂತ್​​​ಗೆ ಬೆಂಬಲವಾಗಿ ನಿಂತಿದ್ದು ಸುಹಾಸ್ ಶೆಟ್ಟಿ. ಇದೇ ವಿಚಾರಕ್ಕೆ ಪ್ರಶಾಂತ್ ಮೇಲಿನ ಸಫ್ವಾನ್ ಸಂಘರ್ಷ, ಸುಹಾಸ್​ ಶೆಟ್ಟಿ ಕಡೆಗೆ ತಿರುಗಿತ್ತು. ಹೀಗಾಗಿಯೇ ಪ್ರಶಾಂತ್​ನನ್ನು ಬಿಟ್ಟ ಸಫ್ವಾನ್, ಸುಹಾಸ್ ಹತ್ಯೆಗೆ ಸ್ಕೆಚ್ ಹಾಕಿದ್ದ. ಒಂದಷ್ಟು ಕ್ರಿಮಿನಲ್​​ಗಗಳ ಜೊತೆಸೇರಿ ಸಂಚು ರೂಪಿಸಿದ್ದ. ಅದರಂತೆ ಮಿನಿ ಕಂಟೇನರ್ ಚಲಾಯಿಸಿದ್ದ ಸಫ್ವಾನ್ ಸುಹಾಸ್ ಕಾರಿಗೆ ಗುದ್ದಿದ್ದ. ಬಲಿಕ ಮುಝಮ್ಮಿಲ್ ಎಂಬಾತ ಚಲಾಯಿಸಿಕೊಂಡು ಬಂದ ಸ್ವಿಫ್ಟ್​ ಕಾರಿನಲ್ಲಿದ್ದ ಹಂತಕರು, ನಟ್ಟ ನಡುರಸ್ತೆಯಲ್ಲೇ ಸುಹಾಸ್​​ನನ್ನು ಕೊಲೆ ಮಾಡಿದ್ದರು.

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು

ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣದಲ್ಲಿ ಬಂಧಕ್ಕೊಳಗಾಗಿರುವ ಆರೋಪಿಗಳಿಗೆ ಕ್ರಿಮಿನಲ್ ಹಿನ್ನೆಲೆ ಇದೆ.

ಯಾರು ಈ ಸಫ್ವಾನ್?

ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಫ್ವಾನ್, ಮಂಗಳೂರಿನ ಬಳಿಯ ಶಾಂತಿಗುಡ್ಡೆ ಪೇಜಾವರ ಗ್ರಾಮದವನು. ಅಬ್ದುಲ್ ನಾಸಿರ್ ಎಂಬುವವರ ಮಗನಾದ ಈತ ಚಾಲಕನಾಗಿ ಕೆಲಸ ಮಾಡುತ್ತಿದ್ದ.

ಯಾರು ಈ ನಿಯಾಜ್?

ಮೇಸ್ತ್ರಿ ಕೆಲಸ ಮಾಡುತ್ತಿರುವ ನಿಯಾಜ್ ಕೂಡ ಕೊಲೆಯಲ್ಲಿ ಶಾಮೀಲಾಗಿದ್ದಾನೆ. ಈತ ಮಂಗಳೂರಿನ ಬಜ್ಪೆ ಶಾಂತಿಗುಡ್ಡೆ ಮಸೀದಿ ಬಳಿ ವಾಸ್ತವ್ಯವಿದ್ದಾನೆ.

ಮುಝಮಿಲ್ ಯಾರು?

ಮಂಗಳೂರಿನ ಮೊಹಮ್ಮದ್ ಮುಝಮಿಲ್ 4 ತಿಂಗಳ ಹಿಂದೆ ಸೌದಿ ಅರೇಬಿಯಾದಿಂದ ಬಂದಿದ್ದ. ನವ ವಿವಾಹಿತನಾಗಿರುವ ಈತ ಕೂಡ ಕೊಲೆಯಲ್ಲಿ ಶಾಮೀಲಾಗಿದ್ದಾನೆ. ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಒಂದು ಪ್ರಕರಣ ಕೂಡ ಇದೆ.

ಯಾರು ಈ ಕಲಂದರ್ ಶಾಫಿ?

ಮಂಗಳೂರಿನ ಕುರ್ಸು ಗುಡ್ಡೆ ಕಳವಾರಿನ ಕಲಂದರ್ ಶಾಫಿ ಕೂಡ ಪ್ರಕರಣದಲ್ಲಿ ಶಾಮೀಲಾಗಿದ್ದಾನೆ. ಈ ಕಲಂದರ್ ಶಾಫಿ ಬೆಂಗಳೂರಿನಲ್ಲಿ ಸೇಲಸ್​​ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಈತನ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಯಾರು ಮೊಹಮ್ಮದ್ ರಿಜ್ವಾನ್?

ಇನ್ನು ಕೊಲೆಯಲ್ಲಿ ಮೊಹಮ್ಮದ್ ರಿಜ್ವಾನ್ ಕೈವಾಡವೂ ಇದೆ. ಈತ ಮಂಗಳೂರಿನ ಜೋಕಟ್ಟೆಯ ಈದ್ಗಾ ಮಸೀದಿ ಹತ್ತಿರ ವಾಸವಿದ್ದಾನೆ. ಸೌದಿ ಅರೇಬಿಯಾ ಆಯಿಲ್ ಪ್ಲಾಂಟ್​​ನಲ್ಲಿ ಕೆಲಸ ಮಾಡುತ್ತಿದ್ದ.

ಸುಹಾಸ್ ಕೊಲೆಯಲ್ಲಿ ಇಬ್ಬರು ಹಿಂದೂ ಯುವಕರು!

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕೇವಲ ಮುಸ್ಲಿಮರು ಅಷ್ಟೇ ಅಲ್ಲ, ಬ್ಬರು ಹಿಂದೂ ಯುವಕರು ಕೂಡ ಶಾಮೀಲಾಗಿದ್ದಾರೆ. ಆ ಪೈಕಿ ಮೊದಲನೆಯವನು ರಂಜಿತ್. ಮತ್ತೊಬ್ಬ ನಾಗರಾಜ್.

ಯಾರು ಈ ರಂಜಿತ್?

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ರುದ್ರ ಪಾದದ ರಂಜಿತ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸುಹಾಸ್ ಮೇಲೆ ದಾಳಿ ಮಾಡಲು ಈತನೇ ಲಾಂಗ್ ತಂದುಕೊಟ್ಟಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.

ಯಾರು ಈ ನಾಗರಾಜ್?

ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಮಾವಿನಕೆರೆ ನಿವಾಸಿ.

ಸದ್ಯ ಸುಹಾಸ್ ಹತ್ಯೆಯ ನೈಜ ಕಾರಣ ಖಾಕಿ ತನಿಖೆಯಲ್ಲಿ ಹೊರಬಿದ್ದಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಮತ್ತಷ್ಟು ವಿಚಾರಗಳನ್ನು ಬಯಲಿಗೆಳೆಯಲು ತನಿಖೆ ಮುಂದುವರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

5 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

5 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

6 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

6 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

14 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

1 day ago