Breaking
12 Jan 2026, Mon

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

ರಿಪ್ಪನ್ ಪೇಟೆ : ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಇಬ್ಬರು ಮಕ್ಕಳನ್ನು ಅನಾಥರನ್ನಾಗಿಸಿದ ಹೃದಯವಿದ್ರಾವಕ ಘಟನೆ ಸಮೀಪದ ತಮ್ಮಡಿಕೊಪ್ಪದಲ್ಲಿ ನಡೆದಿದೆ.

ತಮ್ಮಡಿಕೊಪ್ಪ ಗ್ರಾಮದ ಸುಜಾತ (33) ಆಯನೂರು ಕೋಟೆ ಗ್ರಾಮದ ಸಚಿನ್ (27) ಮೃತ ದುರ್ಧೈವಿಯಾಗಿದ್ದಾರೆ.

ನಡೆದಿದ್ದೇನು..!!?

ಮದುವೆಯಾಗಿ 14 ವರ್ಷವಾಗಿದ್ದ ವಿವಾಹಿತ ಮಹಿಳೆಯೊಬ್ಬಳು ಪತಿ ಕಳೆದ ಹಲವು ವರ್ಷಗಳಿಂದ ಪತಿ ನಾಪತ್ತೆಯಾಗಿದ್ದ ಕಾರಣ ಮತ್ತೋರ್ವ ಗಂಡಸಿನ ಆಶ್ರಯ ಬಯಸಿದ್ದಳು.ಆದರೆ ಅದೇ ಯುವಕನೊಂದಿಗೆ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸುಜಾತ (33) ಎಂಬ ಮಹಿಳೆಗೆ 14 ವರ್ಷದ ಹಿಂದೆ ಮದುವೆಯಾಗಿತ್ತು. ಎರಡು ಮಕ್ಕಳಿದ್ದರು. ಗಂಡ ದಿಡೀರ್ ಎಂದು ನಾಪತ್ತೆಯಾದ ಬೆನ್ನಲ್ಲೇ ಆತ ಕಳೆದ ಮೂರು ನಾಲ್ಕು ವರ್ಷದಿಂದ ಸಂಪರ್ಕಕ್ಕೆ ಬಂದಿಲ್ಲ. ಬೆಳಗಾವಿಯಲ್ಲಿದ್ದ ಸುಜಾತ ಮೂರು ನಾಲ್ಕು ವರ್ಷದ ಹಿಂದೆ ಶಿವಮೊಗ್ಗದ ರಿಪ್ಪನ್ ಪೇಟೆಯ ತಮ್ಮಡಿಕೊಪ್ಪದಲ್ಲಿರುವ ತವರು ಮನೆಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು.

ಮೊಬೈಲ್ ಕರೆ ಮೂಲಕ ಪರಿಚಯವಾದ ಸಚಿನ್ ;

ಗಂಡ ಬಿಟ್ಟು ಎರಡು ಮೂರು ವರ್ಷ ಆಗಿತ್ತು. ಅಪರಿಚಿತ ಮೊಬೈಲ್  ಕರೆಯಿಂದ ಆಯನೂರು ಕೋಟೆ ಗ್ರಾಮದಲ್ಲಿ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಸಚಿನ್ ಸುಜಾತಳ ಸಂಪರ್ಕಕ್ಕೆ ಬಂದಿದ್ದ. ಸಂಪರ್ಕ ಸ್ನೇಹವಾಗಿ ಸಲುಗೆಗೆ ತಿರುಗಿದೆ. ಇವಳ ಕಷ್ಟವನ್ನು ಅರಿತ ಯುವಕ ಬಾಳು ನೀಡುವ ಸಲುವಾಗಿ ಕಳೆದ ಒಂದು ವಾರದಿಂದ ಸುಜಾತಳ ಜೊತೆ ಬಂದು ವಾಸವಾಗಿದ್ದ.

ಬುದ್ದಿವಾದ ಹೇಳಿದ್ದೇ ತಪ್ಪಾಯ್ತು ;

ಕಲ್ಮನೆಯಲ್ಲಿದ್ದ ಸುಜಾತಳ ಸಹೋದರಿ ಗೀತಾ ಎಂಬುವವರು ರಿಪ್ಪನ್ ಪೇಟೆಯಲ್ಲಿ ತಮ್ಮ ಮಕ್ಕಳು ಶಾಲೆಗೆ ಸೇರಿಸಲು ಬಂದಿದ್ದರು. ಆಗ ರೆಡ್ ಹ್ಯಾಂಡ್ ಆಗಿ ಪತ್ತೆಯಾಗಿದ್ದ ಸಚಿನ್ ಗೆ ಬುದ್ದಿವಾದ ಹೇಳಲಾಗಿತ್ತು. ಬುದ್ದಿವಾದ ಹೇಳಿ ಸಹೋದರಿ ಇತ್ತ ಬರುತ್ತಿದ್ದಂತೆ ನಿನ್ನೆ ಬೆಳಿಗ್ಗೆ  ಸುಜಾತ ಮತ್ತು ಸಚಿನ್ ಕಳೆ ನಾಶಕವನ್ನ ಕುಡಿದಿದ್ದಾರೆ.

ಸುಜಾತಳಿಗೆ ಸಚಿನ್ ವಿಷ ಕುಡಿಸಿದ್ದಾನೆ – ಸುಜಾತ ಕುಟುಂಬಸ್ಥರ ಆರೋಪ

ಸಚಿನ್ ಸುಜಾತಳಿಗೆ ಬಲವಂತವಾಗಿ ಕುಡಿಸಿ ಸಾಯಿಸಿರುವುದಾಗಿ ಸುಜಾತಳ ಕುಟುಂಬ ಆರೋಪಿಸಿದೆ. ಸಚಿನ್ ಸುಜಾತಳಿಗೆ ಬಲವಂತವಾಗಿ ವಿಷ ಕುಡಿಸಿ ಕೊಲೆಗೈದು ಆ ನಂತರ ಆತ ವಿಷ ಕುಡಿದಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇಬ್ಬರನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ 11-50 ಕ್ಕೆ ಮೆಗ್ಗಾನ್ ನಲ್ಲಿ ಇಬ್ಬರೂ ಜೀವ ಕಳೆದುಕೊಂಡಿದ್ದಾರೆ.

ಒಟ್ಟಾರೆಯಾಗಿ ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಆ ಕಡೆ ಅಪ್ಪನೂ ಇಲ್ಲದೇ ಈ ಕಡೇ ಅಮ್ಮನೂ ಇಲ್ಲದೇ ಅನಾಥರಾಗಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *