January 11, 2026

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ

ರಿಪ್ಪನ್‌ಪೇಟೆ;-ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು ದಾರ್ಶನಿಕರ ಕವಿಗಳ ಸಣ್ಣ ಪುಟ್ಟು ನೀತಿ ಕಥೆಗಳ ಆಧ್ಯಯನ ಮಾಡಿಸಿ ಜ್ಞಾನದಾಸೋಹವನ್ನು ಕೊಡಿಸುವ ಕೆಲಸ ಮಾಡುವ ಮೂಲಕ ಪ್ರತಿಭಾವಂತರನ್ನಾಗಿ ಮಾಡಲು ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುದೀಂದ್ರಪೂಜಾರಿ ಹೇಳಿದರು.

ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಂಥಾಲಯದವರು ಆಯೋಜಿಸಲಾದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಆತಿಥಿಯಾಗಿ ಭಾಗವಹಿಸಿ ಮಾತನಾಡಿ ಬೇಸಿಗೆ ಶಿಬಿರದ ಮೂಲಕ ಮಕ್ಕಳಿಗೆ ಸಾಂಸ್ಕೃತಿಕ ಹಾಗೂ ಸಂಸ್ಕಾರವನ್ನು ನೀಡಿ ಸುಸಂಸ್ಕೃತರನ್ನಾಗಿ ಮಾಡಲು ಉತ್ತಮ ವೇದಿಕೆಯಾಗಿದೆ ಎಂದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷಿö್ಮ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾಂಸ್ಕೃತಿಕ ಚಟುವಟಿಕೆಯೊಂದಿಗೆ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚು ಅಧ್ಯತೆ ಕಲ್ಪಿಸುವ ವೇದಿಕೆಯಾಗಿದೆ ಎಂದರು.

ಗ್ರಾಮ ಪಂಚಾಯಿತ್ ಸದಸ್ಯ ಗಣಪತಿ ಗವಟೂರು, ಜಿ.ಡಿ.ಮಲ್ಲಿಕಾರ್ಜುನ,ಪಿಡಿಓ ನಾಗರಾಜ್,ಕಾರ್ಯದರ್ಶಿ ಮಧುಶ್ರೀ, ಗಣಕ ಯಂತ್ರದ ಅಪರೇಟರ್ ಲಕ್ಷಿ ನಾಗರಾಜ್, ಪಂಚಾಯತ್ ಸಿಬ್ಬಂದಿವರ್ಗ ಹಾಜರಿದ್ದರು.

About The Author

Leave a Reply

Your email address will not be published. Required fields are marked *