ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ
ರಿಪ್ಪನ್ಪೇಟೆ;-ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು ದಾರ್ಶನಿಕರ ಕವಿಗಳ ಸಣ್ಣ ಪುಟ್ಟು ನೀತಿ ಕಥೆಗಳ ಆಧ್ಯಯನ ಮಾಡಿಸಿ ಜ್ಞಾನದಾಸೋಹವನ್ನು ಕೊಡಿಸುವ ಕೆಲಸ ಮಾಡುವ ಮೂಲಕ ಪ್ರತಿಭಾವಂತರನ್ನಾಗಿ ಮಾಡಲು ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುದೀಂದ್ರಪೂಜಾರಿ ಹೇಳಿದರು.
ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಂಥಾಲಯದವರು ಆಯೋಜಿಸಲಾದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಆತಿಥಿಯಾಗಿ ಭಾಗವಹಿಸಿ ಮಾತನಾಡಿ ಬೇಸಿಗೆ ಶಿಬಿರದ ಮೂಲಕ ಮಕ್ಕಳಿಗೆ ಸಾಂಸ್ಕೃತಿಕ ಹಾಗೂ ಸಂಸ್ಕಾರವನ್ನು ನೀಡಿ ಸುಸಂಸ್ಕೃತರನ್ನಾಗಿ ಮಾಡಲು ಉತ್ತಮ ವೇದಿಕೆಯಾಗಿದೆ ಎಂದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷಿö್ಮ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾಂಸ್ಕೃತಿಕ ಚಟುವಟಿಕೆಯೊಂದಿಗೆ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚು ಅಧ್ಯತೆ ಕಲ್ಪಿಸುವ ವೇದಿಕೆಯಾಗಿದೆ ಎಂದರು.
ಗ್ರಾಮ ಪಂಚಾಯಿತ್ ಸದಸ್ಯ ಗಣಪತಿ ಗವಟೂರು, ಜಿ.ಡಿ.ಮಲ್ಲಿಕಾರ್ಜುನ,ಪಿಡಿಓ ನಾಗರಾಜ್,ಕಾರ್ಯದರ್ಶಿ ಮಧುಶ್ರೀ, ಗಣಕ ಯಂತ್ರದ ಅಪರೇಟರ್ ಲಕ್ಷಿ ನಾಗರಾಜ್, ಪಂಚಾಯತ್ ಸಿಬ್ಬಂದಿವರ್ಗ ಹಾಜರಿದ್ದರು.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…