ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ
ಸೊರಬ: : ರೈಸ್ಮಿಲ್ ಆವರಣದಲ್ಲಿ ನಿಲ್ಲಿಸಿದ್ದ ೩ ಲಾರಿಗಳ ಡೀಸೆಲ್ ಟ್ಯಾಂಕ್ನಲ್ಲಿದ್ದ ಅಂದಾಜು ೪೫ ಸಾವಿರ ರೂ. ಮೌಲ್ಯದ ಸುಮಾರು ೪೫೦ ಲೀಟರ್ ಡಿಸೇಲ್ನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಯುವಕರಿಬ್ಬರನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ.
ಬಂಧಿತರೆಂದರೆ ಶಿವಮೊಗ್ಗದ ಟಿಪ್ಪುನಗರ ಬಲಭಾಗ ೫ ನೇ ಕ್ರಾಸ್ ವಾಸಿ ಸೋನು (೨೬) ಮತ್ತು ಭರ್ಮಪ್ಪನಗರದ ಸೈಯದ್ ಹುಸೇನ್ ಅಲಿಯಾಸ್ ಗಫಾರ್ (೨೫). ಇವರಿಂದ ಅಂದಾಜು ಮೌಲ್ಯ ೯ ಲಕ್ಷ ರೂ. ನ ಟಾಟಾ ಇಂಟ್ರಾ ಗೂಡ್ಸ್ ವಾಹನ, ರೂ ೧೫ ಸಾವಿರ ರೂ. ನಗದು ಮತ್ತು ೩೦ ಲೀಟರ್ನ ೫ ಕ್ಯಾನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೇ ೨೦ರ ರಾತ್ರಿ ಕಳ್ಳರು ವಿಜಯಲಕ್ಷ್ಮಿ ರೈಸ್ ಮಿಲ್ಲಿನ ಆವರಣದಲ್ಲಿದ್ದ ಲಾರಿಯಿಂದ ಡೀಸೆಲ್ ಕಳುವು ಮಾಡಿದ್ದಾರೆಂದು ಮಾಲೀಕ ಕೋಗುಣಸಿಯ ವಿಕ್ರಮ್ ಭಟ್ ದೂರು ನೀಡಿದ್ದರು.
ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…