ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್
ಟ್ರಾಫಿಕ್ ಪೊಲೀಸರ ಅಜಾಗರೂಕತೆಯ ಪರಿಣಾಮ ಮಂಡ್ಯದಲ್ಲಿ ಮೂರು ವರ್ಷದ ಮಗು ರಸ್ತೆ ಅಪಘಾತಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ನಾಯಿ ಕಚ್ಚಿದ್ದ ಮಗುವನ್ನು ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಪೊಲೀಸರು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ.ಈ ವೇಳೆ ಮಗುವಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿದೆ ಎಂದು ತಿಳಿಸಿದ ನಂತರ ಪೊಲೀಸರು ಹೊರಡಲು ಹೇಳಿದ್ದು, ಈ ವೇಳೆ ಪಕ್ಕಕ್ಕೆ ಚಲಿಸುವಾಗ ಬೈಕ್ ಸ್ಕಿಡ್ ಆಗಿದೆ. ಆದ್ರೆ ಈ ಸಂದರ್ಭದಲ್ಲಿ ಹಿಂಬದಿಯಿಂದ ಬಂದು ಟೆಂಪೋ ಗಾಡಿಗೆ ಗುದ್ದಿದ್ದು ಮಗು ಕೆಳಗೆ ಬಿದ್ದು ಸಾವಿಗೀಡಾಗಿದೆ.
ಈ ಘಟನೆಯಿಂದ ಮಗುವಿನ ಪೋಷಕರು ಮತ್ತು ಸಾರ್ವಜನಿಕರು ಪೊಲೀಸರ ವಿರುದ್ಧ ರೊಚ್ಚಿಗೆದ್ದು ಪ್ರತಿಭಟನೆಗೆ ಮುಂದಾಗಿದ್ದು ಈ ಘಟನೆಗೆ ಕಾರಣರಾದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೀಗೆ ಪರಿಸ್ಥಿತಿ ಕೈಮೀರುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಮಾಹಿತಿ ತರಿಸಿಕೊಂಡ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಒಟ್ಟು 6 ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ ಕೇವಲ ಸಸ್ಪೆಂಡ್ ಮಾಡಿದ್ರೆ ಸಾಲದು, ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್.ಐ.ಆರ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…