ಲಕ್ನೋ ಏರ್ ಪೋರ್ಟ್ ನಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ: 250 ಹಜ್ ಯಾತ್ರಿಕರು ಪಾರು! |WATCH ವೀಡಿಯೋ

ಲಕ್ನೋ ಏರ್ ಪೋರ್ಟ್ ನಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ: 250 ಹಜ್ ಯಾತ್ರಿಕರು ಪಾರು! |WATCH ವೀಡಿಯೋ

ವಿಮಾನ ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷ ಉಂಟಾದ ಹಿನ್ನೆಲೆ ಲಖನೌ ಏರ್ ಪೋರ್ಟ್ ನಲ್ಲಿ ಭಾರಿ ದುರಂತ ತಪ್ಪಿದೆ.ನಿನ್ನೆ ಭಾನುವಾರ ಲಕ್ನೋ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿಮಾನ ಲ್ಯಾಂಡಿಂಗ್ ವೇಳೆ ವಿಮಾನದ ಚಕ್ರದಲ್ಲಿ ಕಿಡಿ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ.

ಹೈಡ್ರೋಲಿಕ್ ಸೋರಿಕೆಯಿಂದ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಭಾನುವಾರ ಬೆಳಿಗ್ಗೆ ಲಕ್ನೋ ವಿಮಾನ ನಿಲ್ದಾಣದಲ್ಲಿ ಹಜ್ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಸೌದಿಯಾ ಏರ್ಲೈನ್ಸ್ ವಿಮಾನವು ಲ್ಯಾಂಡಿಂಗ್ ಸಮಯದಲ್ಲಿ ತಾಂತ್ರಿಕ ದೋಷವನ್ನು ಅನುಭವಿಸಿತು.


ರನ್ವೇಯಲ್ಲಿ ಇಳಿಯುತ್ತಿದ್ದಂತೆ ವಿಮಾನದ ಚಕ್ರದಿಂದ ಕಿಡಿಗಳು ಮತ್ತು ಹೊಗೆ ಹೊರಹೊಮ್ಮಿತು. ಇದರಿಂದಾಗಿ ತಕ್ಷಣದ ತುರ್ತು ಕ್ರಮ ಕೈಗೊಳ್ಳಲಾಯಿತು. ಮೂಲಗಳ ಪ್ರಕಾರ, ಬೆಳಿಗ್ಗೆ 6:30 ರ ಸುಮಾರಿಗೆ ವಿಮಾನ ಇಳಿಯುತ್ತಿದ್ದಂತೆ ವಿಮಾನದ ಚಕ್ರದಿಂದ ಕಿಡಿಗಳು ಮತ್ತು ಹೊಗೆ ಬರುತ್ತಿರುವುದು ಕಂಡುಬಂದಿದೆ. ವಿಮಾನ, SV 3112, ಹಿಂದಿನ ರಾತ್ರಿ 10:45 ಕ್ಕೆ ಜೆಡ್ಡಾದಿಂದ 250 ಹಜ್ ಯಾತ್ರಿಕರು ಮತ್ತು ಸಿಬ್ಬಂದಿಯೊಂದಿಗೆ ಹೊರಟಿತ್ತು.

ಹಜ್ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಸೌದಿಯಾ ಏರ್‌ಲೈನ್ಸ್‌ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಲಕ್ನೋ ವಿಮಾನ ನಿಲ್ದಾಣದಲ್ಲಿ (Lucknow Airport) ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನ ಚಕ್ರಗಳು ರನ್‌ ವೇಗೆ (Runway) ಇಳಿಯುತ್ತಿದ್ದಂತೆ ಟೈಯರ್‌ನಿಂದ ಬೆಂಕಿ ಕಿಡಿಗಳು ಚಿಮ್ಮಿದ್ದು, ದಟ್ಟ ಹೊಗೆ ಹೊಮ್ಮಿದೆ. ಅದೃಷ್ಟವಶಾತ್‌ ಯಾವುದೇ ದುರಂತ ಸಂಭವಿಸದೇ ನೂರಾರು ಯಾತ್ರಿಕರು, ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರ ವಿಡಿಯೋ ಕೂಡ ವೈರಲ್‌ ಆಗಿದೆ.

SV3112 ಸಂಖ್ಯೆಯ ವಿಮಾನ ಶನಿವಾರ ರಾತ್ರಿ 10:45ಕ್ಕೆ ಜೆಡ್ಡಾದಿಂದ 250 ಹಜ್ ಯಾತ್ರಿಕರನ್ನು ಕರೆದೊಯ್ಯುತ್ತಿತ್ತು, ಸಿಬ್ಬಂದಿಗಳೂ ಇದ್ದರು. ಹಜ್‌ಗೆ ಹೊರಟಿದ್ದ ವೇಳೆ ಬೆಳಗ್ಗೆ 6:30ರ ಸುಮಾರಿಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ತುರ್ತು ಭೂಸ್ಪರ್ಶ ಮಾಡಿದೆ. ಈ ವೇಳೆ ವಿಮಾನದ ಟೈಯರ್‌ನಿಂದ ಬೆಂಕಿಯ ಕಿಡಿಗಳು ಚಿಮ್ಮಿದೆ ಜೊತೆಗೆ ಟೈರ್‌ನಿಂದ ದಟ್ಟ ಹೊಗೆ ಬಂದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

2 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago