ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ
ಸೊರಬ ತಾಲೂಕಿನ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ. ಶಿರಾಳಕೊಪ್ಪದ ಪಿಎಸ್ಐ ಪ್ರಶಾಂತ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮತ್ತು ಖಡಕ್ ದಾಳಿ ಹಿನ್ನಲೆಯಲ್ಲಿ 48 ಗೋವುಗಳ ರಕ್ಷಣೆಯಾಗಿದೆ.
ಆದರೂ ಗೋವುಗಳ ವಧೆ ನಡೆದಿದ್ದು 250 ಕೆಜಿ ಗೋಮಾಂಸ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗ್ರಾಮದ ಸರ್ವೆನಂಬರ್ 63 ರಲ್ಲಿ ಗೋವುಗಳನ್ನ ತಂದು ವದೆ ಮಾಡಲು ಕಟ್ಟಿಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆದಿದೆ.
ಶಿರಾಳಕೊಪ್ಪದಿಂದ 35 ಗೋವುಗಳನ್ನ ಶಿವಮೊಗ್ಗದ ಮಹಾವೀರ ಗೋಶಾಲೆಗೆ ಕರೆತರಲಾಗುತ್ತಿದೆ. ಉಳಿದ 13 ಗೋವಿಗಳನ್ನ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಡೂರಿನ ಗೋಶಾಲೆಗೆ ಕರೆದೊಯ್ಯಲಾಗಿದೆ.
ಸೂಳೆಬೈಲಿನಲ್ಲಿ ಗೋವುಗಳ ರಕ್ಷಣೆ
ಶಿವಮೊಗ್ಗದ ಸೂಳೆಬೈಲಿನಲ್ಲಿ ಗೋವುಗಳನ್ನ ರಕ್ಷಿಸಲಾಗಿದೆ. ನಿನ್ನೆ ತುಂಗ ನಗರ ಪೊಲೀಸ್ ಠಾಣೆಯ ಪಿಎಸ್ಐ ರಘುವೀರ್ ಅವರ ನೇತೃತ್ವದಲ್ಲಿ ಮನೆಯ ಮೇಲೆ ದಾಳಿ ನಡೆದಿದ್ದು 6 ಗೋವುಗಳನ್ನ ರಕ್ಷಿಸಲಾಗಿದೆ. ಕಸಾಯಿ ಖಾನೆಯಲ್ಲಿದ್ದ 6 ಗೋವುಗಳ ರಕ್ಷಣೆಯಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್