ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ
ಶಿವಮೊಗ್ಗ: ಮಾವ- ಅಳಿಯನ ನಡುವಿನ ಜಗಳ ಅಳಿಯನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಗುರುವಾರ (ಜೂ.05) ಸಂಜೆ ನಡೆದಿದೆ.
ರವೀಂದ್ರ (26) ಕೊಲೆಯಾದ ದುರ್ದೈವಿ. ಸೊರಬ ತಾಲೂಕಿನ ಆನವಟ್ಟಿ ಬಳಿಯ ಜಡೆ ಗ್ರಾಮದಲ್ಲಿ ಘಟನೆ ನಡೆದಿದೆ.
ಗುರುವಾರ ಸಂಜೆ ಮಾವ ಉಮೇಶ್ ಹಾಗೂ ಅಳಿಯ ರವೀಂದ್ರ ಒಟ್ಟಾಗಿ ಎಂಸ್ಐಎಲ್ ಮಳಿಗೆಗೆ ಹೋಗಿದ್ದರು. ಬಳಿಕ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಊಟ ಮಾಡುವಾಗ ಮಾತಿಗೆ ಮಾತು ಬೆಳೆದು ಮಾವ- ಅಳಿಯನ ನಡುವೆ ಗಲಾಟೆಯಾಗಿದೆ. ಈ ವೇಳೆ ಹೋಟೆಲ್ ನಲ್ಲಿದ್ದ ಕತ್ತರಿ ತೆಗೆದು ಉಮೇಶ್ ಅಳಿಯ ರವೀಂದ್ರಗೆ ಚುಚ್ಚಿದ್ದಾನೆ.
ಸ್ಥಳೀಯರು ತಕ್ಷಣವೇ ರವೀಂದ್ರನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ರವೀಂದ್ರ ಶುಕ್ರವಾರ ಬೆಳಿಗ್ಗೆ ಅಸುನೀಗಿದ್ದಾನೆ.ಕೊಲೆ ಆರೋಪಿ ಉಮೇಶ್ (46) ನನ್ನು ಆನವಟ್ಟಿ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…