ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ
ರಿಪ್ಪನ್ ಪೇಟೆ : : ಗುರುಗಳು ವಿದ್ಯಾರ್ಥಿಗಳಿಗೆ ಅಕ್ಕರೆ ತೋರಿದರೆ ಸಕ್ಕರೆಯ ಜೀವನ ಅವರದಾಗುತ್ತದೆ. ಇದರಿಂದ ಗುರು, ಶಿಷ್ಯರ ಸಂಬಂಧ ಪರಿ ಶುದ್ಧವಾಗಿ, ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ಹೇಳಿದರು.
ತಳಲೆ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ 33 ವರ್ಷ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಗಣಪತಿ ಕೆ ವಿ ಅವರಿಗೆ ಶಾಲೆಯ ಶಿಕ್ಷಕ ವೃಂದ, ಶಾಲಾ ಆಡಳಿತ ವರ್ಗ ಮತ್ತು ಸಾರ್ವಜನಿಕರು ಶನಿವಾರ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗಣಪತಿ ಕೆ ವಿ ಅವರು ದಾನಿಗಳಿಂದ ದೇಣಿಗೆ ಪಡೆದು ಶಾಲೆಯ ಅಭಿವೃದ್ದಿಗೆ ಶ್ರಮಿಸಿದ್ದಾರೆ. ತಳಲೆ ಶಾಲೆಯಲ್ಲಿ ಮೂರು ವರ್ಷಗಳ ಉತ್ತಮ ಸೇವೆ ಸಲ್ಲಿಸಿ ಈಗ ನಿವೃತ್ತಿ ಹೊಂದಿದ್ದಾರೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗಣಪತಿ ಕೆ ವಿ ಶಿಕ್ಷಕರು ಕಲಿತ ಋಣವನ್ನು ವಿದ್ಯಾರ್ಥಿಗಳಿಗೆ ಕಲಿಸಿ ತೀರಿಸಬೇಕು. ಶಿಕ್ಷಕರಾದವರು ಪುಸ್ತಕಗಳನ್ನು ಆಳವಾಗಿ ಅಧ್ಯಯನ ಮಾಡಿ, ಅದರ ಜ್ಞಾನವನ್ನು ಶಾಶ್ವತವಾಗಿ ಮಸ್ತಕದಲ್ಲಿರಿಸಿಕೊಂಡು, ಕಲಿತ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು. ಅವರನ್ನು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸುವುದು ಶಿಕ್ಷಕರ ಮೂಲ ಜವಾಬ್ದಾರಿ ಎಂದು ಹೇಳಿದರು.
ವಿದ್ಯೆಗೆ ಜಾತಿ ಮತ್ತು ವರ್ಗ ಎಂಬ ಭೇದವಿಲ್ಲ. ರಾಮಾಯಣ ಕರ್ತೃ ವಾಲ್ಮೀಕಿ, ಮಹಾಭಾರತ ಕರ್ತೃ ವ್ಯಾಸ, ಸರ್ವಜ್ಞ ಮತ್ತು ಕನಕದಾಸರು ಶ್ರೇಷ್ಠರೆಲ್ಲರೂ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ. ಸರ್ವರನ್ನೂ ಸಮಾನವಾಗಿ ಕಾಣುವುದೇ ಶಿಕ್ಷಣದ ಗುರಿ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.
ಹೊಸನಗರ ತಾಲೂಕ್ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಮಾತನಾಡಿ ಗಣಪತಿ ಕೆ ವಿ ರವರು ಚೈತನ್ಯಶೀಲ ಶಿಕ್ಷಕರಾಗಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುತ್ತಾ ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಶಿಷ್ಯ ವೃಂದದಲ್ಲಿ ಆಪ್ತ ಶಿಕ್ಷಕರೆಂದು ಗುರುತಿಸಿಕೊಂಡಿದ್ದಾರೆ ಎಂದರು.
ಈ ಸಂಧರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಿವಕುಮಾರ್ , ಉಪಾಧ್ಯಕ್ಷೆ ಮಹಾಲಕ್ಷ್ಮಿ , ಗ್ರಾಪಂ ಸದಸ್ಯ ಶ್ರೇಯಸ್ , ಶಿಕ್ಷಕರಾದ ಬೋಜಪ್ಪ , ಕುಬೇರಪ್ಪ , ಶಿಲ್ಪ ಪೋಷಕರಾದ ಗುರುರಾಜ್ , ಮಹೇಶ್ ಬೆನವಳ್ಳಿ , ಲೋಕೇಶ್ ಹಾಗೂ ಇನ್ನಿತರರಿದ್ದರು.
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…