RIPPONPETE |ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ರಿಪ್ಪನ್ ಪೇಟೆ : ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆಘಾತಕಾರಿ ಘಟನೆಯೊಂದು ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದಲ್ಲಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ ಸ್ಥಳಕ್ಕೆ ತೆರಳಿ ಗ್ರಾಮ ಒನ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ನಂತರ ಸ್ಥಳಕ್ಕೆ ದೌಡಯಿಸಿದ ಉಪ ತಹಶೀಲ್ದಾರ್ ರವರಿಗೆ ಭ್ರಷ್ಟಾಚಾರದ ಕೂಪವಾಗಿರುವ ಈ ಗ್ರಾಮ ಒನ್ ಐಡಿಯನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿರುವ ಘಟನೆ ನಡೆದಿದೆ.

ಪಟ್ಟಣದ ಬಡ ವೃದ್ದೆ ಬೀಬಿಜಾನ್ ಎಂಬುವವರು ಆಧಾರ್ ಕಾರ್ಡ್ ನ ನಂಬರ್ ಬದಲಾವಣೆಗೆ ಬಂದಿದ್ದಾಗ, ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ನಿಗದಿತ ಶುಲ್ಕ 50ರೂ ಪಡೆಯುವುದನ್ನು ಬಿಟ್ಟು ಹೆಚ್ಚುವರಿ 350 ರೂ ಹಣವನ್ನು ವಸೂಲಿ ಮಾಡಿದ್ದಾರೆ.ಹಾಗೇ ಇನ್ನೊಬ್ಬ ವ್ಯಕ್ತಿಯ  ಪಾನ್ ಕಾರ್ಡ್ ಹೆಸರು ಬದಲಾವಣೆಗೆ 1000ರೂ ಕೇಳಿದ್ದರೆ , ಪಟ್ಟಣದ ನಿವಾಸಿ ಮುಸ್ತಫಾ ಎಂಬುವವರ ವೋಟರ್ ಐಡಿ ಹೆಸರು ಬದಲಾವಣೆಗೆ 150 ರೂ ಶುಲ್ಕ ಕೇಳಿರುವ ಬಗ್ಗೆ ಹಾಗೇಯೇ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಈ ಕೇಂದ್ರದ ಬಗ್ಗೆ ಹಲವಾರು ದೂರುಗಳು ಕೇಳಿಬಂದಿದೆ ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಕೂಡ ಈ ಬಗ್ಗೆ ಚರ್ಚೆಯಾಗಿತ್ತು.

ಈ ಬಗ್ಗೆ ಮಾಹಿತಿಯನ್ನಾಧರಿಸಿದ ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ ಬಡ ವೃದ್ದೆ ಹಾಗೂ ಇನ್ನಿಬ್ಬರು ಸಂತ್ರಸ್ಥರೊಂದಿಗೆ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರಕ್ಕೆ ತೆರಳಿ ಸರ್ಕಾರಗಳು ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಈ ಯೋಜನೆಗಳನ್ನು ಹಮ್ಮಿಕೊಂಡು ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಯತ್ನಿಸುತ್ತಿದೆ ಆದರೆ ನೀವು ಮಧ್ಯವರ್ತಿಗಳಿಗಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದು ನ್ಯಾಯವೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಆರೋಪಕ್ಕೆ ಗ್ರಾಮ ಒನ್ ಸಿಬ್ಬಂದಿ ಸರಿಯಾಗಿ ಸ್ಪಂದಿಸದ ಕಾರಣ ಸ್ಥಳದಿಂದಲೇ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಗೆ ಮಾಹಿತಿ ತಿಳಿಸಲಾಯಿತು.

ತಹಶೀಲ್ದಾರ್ ಸೂಚನೆ ಮೇರೆಗೆ ಉಪ ತಹಶೀಲ್ದಾರ್ ಗೌತಮ್ ಹಾಗೂ ರಾಜಸ್ವ ನಿರೀಕ್ಷಕರಾದ ಅಫ಼್ರೋಜ್ ಅಹಮದ್ ಸ್ಥಳಕ್ಕಾಗಮಿಸಿ ಸಂತ್ರಸ್ಥರ ಬಳಿ ಅಹವಾಲುಗಳನ್ನು ಆಲಿಸಿ ಗ್ರಾಮ ಒನ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾಗಲೇ ಅನಿರೀಕ್ಷಿತವಾಗಿ ಸ್ಥಳಕ್ಕಾಗಮಿಸಿದ ಮಹಿಳೆಯೊಬ್ಬರು ನನ್ನ ಮೂರು ಸೇವೆ ಗಳಿಗೆ 900 ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ ಈ ಬಗ್ಗೆ ಗ್ರಾಮ ಒನ್ ಸಿಬ್ಬಂದಿ ಉತ್ತರಿಸಲು ತಡಕಾಡಿದ ಪ್ರಸಂಗ ಕಂಡುಬಂದಿತು.

ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಉಪ ತಹಶೀಲ್ದಾರ್ ಗೌತಮ್ ಈ ಗ್ರಾಮ ಒನ್ ಕೇಂದ್ರದ ಮೇಲಿನ ಹೆಚ್ಚುವರಿ ಹಣ ವಸೂಲಿ ಆರೋಪ ಮೇಲ್ನೋಟಕ್ಕೆ ಸತ್ಯ ಎಂದು ತಿಳಿದುಬಂದಿದ್ದು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ತಿಳಿಸಿದರು.

ಈ ಗ್ರಾಮ ಒನ್ ಕೇಂದ್ರದಲ್ಲಿ ಸರ್ಕಾರದ ನಿಯಮಾನುಸಾರ, ಪ್ರತಿ ಸೇವೆಗೂ ನಿಗದಿತ ಶುಲ್ಕವನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು. ಆದರೆ, ಈ ನಿಯಮವನ್ನು ಗಾಳಿಗೆ ತೂರಿ, ಅಮಾಯಕರ ಮತ್ತು ಬಡ ಮಹಿಳೆಯರ ಆಸಹಾಯಕತೆಯನ್ನು ದುರ್ಬಳಕೆ ಮಾಡಿಕೊಂಡು ಹಣ ವಸೂಲಿ ಮಾಡಲಾಗಿದೆ ಎಂದು ತಿಳಿದುಬಂದಿದೆ. “ಗ್ರಾಮ ಒನ್ ಕೇಂದ್ರಗಳು ಬಡವರಿಗೆ ಆಶಾಕಿರಣವಾಗಬೇಕು. ಆದರೆ, ಇಂತಹ ಸಿಬ್ಬಂದಿಯ ವರ್ತನೆಯಿಂದ ಜನರಲ್ಲಿ ಸರ್ಕಾರದ ಮೇಲೆ ನಂಬಿಕೆ ಕಳೆದುಹೋಗುತ್ತದೆ. ಇದು ಅಕ್ಷಮ್ಯ ಅಪರಾಧ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.

ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಗ್ರಾಮ ಒನ್ ಕೇಂದ್ರಗಳ ಕಾರ್ಯವೈಖರಿಯನ್ನು ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಬೇಕು.ಜಿಲ್ಲಾಧಿಕಾರಿಗಳು, ತಹಶೀಲ್ದಾರರು ಹಾಗೂ ಗ್ರಾಮ ಒನ್ ನೋಡಲ್ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಬಡವರಿಗೆ ನ್ಯಾಯ ಒದಗಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

ನಮ್ಮ ಪೋಸ್ಟ್ ಮ್ಯಾನ್ ನ್ಯೂಸ್ ಈ ಪ್ರಕರಣದ ಬೆಳವಣಿಗೆಗಳ ಮೇಲೆ ನಿರಂತರ ನಿಗಾ ಇಡಲಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

12 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

12 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

12 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

15 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

18 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

19 hours ago