RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು
ರಿಪ್ಪನ್ಪೇಟೆ ಗ್ರಾಪಂ ವ್ಯಾಪ್ತಿಯ ಗವಟೂರು ವಾರ್ಡ್ 1 ರ ಕೆರೆಹಳ್ಳಿಯಲ್ಲಿ ಭಾರಿ ಮಳೆಗೆ ದನದ ಕೊಟ್ಟಿಗೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಲಾಗಿದೆ.
ಕೆರೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವವರ ದನದ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.
ನಂತರ ಮಾತನಾಡಿದ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಹೊಸನಗರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅಲ್ಲಲ್ಲಿ ವ್ಯಾಪಕ ಹಾನಿಯಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ಬಡ ಸಂತ್ರಸ್ಥರನ್ನು ಗುರುತಿಸಿ ನೈತಿಕ ಸ್ಥೈರ್ಯ ನೀಡುವ ಸಲುವಾಗಿ ಶಾಸಕರ ಪರ ಆರ್ಥಿಕ ಸಹಕಾರ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರುಗಳಾದ ಚಂದ್ರೇಶ್ , ಸುಂದರೇಶ್ , ಆಸೀಫ಼್ ಭಾಷಾ , ನಿರೂಪ್ ಕುಮಾರ್ , ಪ್ರಕಾಶ್ ಪಾಲೇಕರ್ ,ಗಣಪತಿ ಗವಟೂರು ಹಾಗೂ ರಾಜು ಗೌಡ ಇದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…