ಹನಿಮೂನ್ ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ

ಹನಿಮೂನ್ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ

ಜೂನ್ 09: ಮೇಘಾಲಯಕ್ಕೆ ಹನಿಮೂನ್​ಗೆಂದು ತೆರಳಿ ದಂಪತಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಒಂದೆಡೆ ರಾಜಾ ರಘುವಂಶಿ ಕೊಲೆಯಾಗಿದೆ. ಮತ್ತೊಂದೆಡೆ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸೋನಮ್ ರಘುವಂಶಿ ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ.

ಕಳೆದ 17 ದಿನಗಳಿಂದ ಪೊಲೀಸರು ಮೇಘಾಲಯದಲ್ಲಿ ಸೋನಮ್‌ಗಾಗಿ ಹುಡುಕಾಟ ನಡೆಸುತ್ತಿದ್ದರು.

ಸೋನಮ್ ನಿನ್ನೆ ರಾತ್ರಿ ತನ್ನ ಕುಟುಂಬಕ್ಕೆ ಕರೆ ಮಾಡಿ ತಾನು ಯುಪಿಯ ಘಾಜಿಪುರ ಜಿಲ್ಲೆಯಲ್ಲಿದ್ದೇನೆ ಎಂದು ತಿಳಿಸಿದ್ದಾಳೆ. ಸೋನಮ್ ತನ್ನ ಸಹೋದರ ಗೋವಿಂದ್ ರಘುವಂಶಿಗೆ ಪೊಲೀಸರ ಫೋನ್‌ನಿಂದ ಕರೆ ಮಾಡಿದ್ದಾಳೆ.

ರಾಜಾ ಮೃತದೇಹ ಜೂನ್ 2 ರಂದು ಪತ್ತೆಯಾಗಿತ್ತು

ಸೋನಮ್ ತನ್ನ ಪತಿ ರಾಜಾ ಜೊತೆ ಹನಿಮೂನ್ ಆಚರಿಸಲು ಶಿಲ್ಲಾಂಗ್‌ಗೆ ಹೋಗಿದ್ದರು. ಆದರೆ ನಂತರ ಇಬ್ಬರೂ ನಾಪತ್ತೆಯಾಗಿದ್ದರು.ಕುಟುಂಬವು ಪೊಲೀಸರಿಗೆ ದೂರು ನೀಡಿದಾಗ, ದಂಪತಿಗಾಗಿ ಹುಡುಕಾಟ ಪ್ರಾರಂಭವಾಯಿತು. ಜೂನ್ 2 ರಂದು ರಾಜಾ ರಘುವಂಶಿ ಅವರ ಶವ ಪತ್ತೆಯಾಗಿತ್ತು. ಆದರೆ ಸೋನಮ್ ಬಗ್ಗೆ ಯಾವುದೇ ಸುಳಿವು ಇರಲಿಲ್ಲ.

ಒಬ್ಬ ವ್ಯಕ್ತಿಯನ್ನು ಉತ್ತರ ಪ್ರದೇಶದಿಂದ ಮತ್ತು ಇನ್ನಿಬ್ಬರು ಆರೋಪಿಗಳನ್ನು ಇಂದೋರ್‌ನಿಂದ ಬಂಧಿಸಲಾಗಿದೆ. ಸೋನಮ್ ನಂದಗಂಜ್ ಪೊಲೀಸ್ ಠಾಣೆಯಲ್ಲಿ ಶರಣಾದರು ಮತ್ತು ನಂತರ ಅವರನ್ನು ಬಂಧಿಸಲಾಯಿತು.

ನವವಿವಾಹಿತರಾದ ರಾಜಾ ರಘುವಂಶಿ ಮತ್ತು ಅವರ ಪತ್ನಿ ಸೋನಮ್, ಮೇ 23 ರಂದು ಕಾಣೆಯಾಗುವ ಮೊದಲು ಮೇಘಾಲಯದಲ್ಲಿ ತಮ್ಮ ಹನಿಮೂನ್ ಸಮಯದಲ್ಲಿ ಕೆಲವು ಪ್ರದೇಶಗಳಿಗೆ ಭೇಟಿ ನೀಡಿದ್ದರು. ಜೂನ್ 2 ರಂದು ರಾಜಾ ರಘುವಂಶಿ ಅವರ ಮೃತದೇಹ ಪತ್ತೆಯಾಗಿದ್ದರೂ, ಅವರ ಪತ್ನಿಗಾಗಿ ಹುಡುಕಾಟ ನಡೆಯುತ್ತಿತ್ತು. ಈ ಹನಿಮೂನ್ ಕೊಲೆ ಪ್ರಕರಣವನ್ನು ಭೇದಿಸಿದ್ದಕ್ಕಾಗಿ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಪೊಲೀಸರನ್ನು ಶ್ಲಾಘಿಸಿದ್ದಾರೆ.

ಮೇ 11ರಂದು ವೈವಾಹಿಕ ಜೀವಕ್ಕೆ ಕಾಲಿಟ್ಟಿದ್ದ ರಾಜಾ ರಘುವಂಶಿ(29) ಮತ್ತು ಸೋನಮ್‌ ರಘುವಂಶಿ(25), ಮೇ 20ರಂದು ಹನಿಮೂನ್‌ ಪಯಣ ಆರಂಭಿಸುತ್ತಾರೆ. ಮೇ 21ರಂದು ಮೇಘಾಲಯದ ರಾಜಧಾನಿ ಶಿಲ್ಲಾಂಗ್‌ನ ಬಾಲಾಜಿ ಅತಿಥಿ ಗೃಹದಲ್ಲಿ ಉಳಿದುಕೊಂಡಿದ್ದಾರೆ.ಮೇ 22ರ ಬೆಳಿಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದ ದಂಪತಿ, ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ(ಚಿರಾಪುಂಜಿ) ತೆರಳುತ್ತಾರೆ.

ಈ ವೇಳೆ ಅವರು ಎರಡು ಲಗೇಜ್‌ ಬ್ಯಾಗ್‌ ಅನ್ನು ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25 ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದ ಅವರು ಕೊಠಡಿ ಬೇಕಾದಲ್ಲಿ ಕರೆ ಮಾಡುವುದಾಗಿಯೂ ಹೇಳಿದ್ದರು.

ಮೇ 23: ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ತಂಗುತ್ತಾರೆ. ಆ ವೇಳೆ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿರುತ್ತಾರೆ.ಚಕ್ರ ವಾಹನವೊಂದು ಶಿಲ್ಲಾಂಗ್‌ನಿಂದ ಸೊಹ್ರಾಗೆ ಹೋಗುವ ರಸ್ತೆಯ ಕೆಫೆಯೊಂದರ ಬಳಿ ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವೀ ಸಾವ್ಡಾಂಗ್ ಜಲಪಾತದ ಕೆಳಗಿನ ಕಮರಿಯಲ್ಲಿ ಶವವಿರುವುದನ್ನು ಡ್ರೋನ್‌ ಪತ್ತೆ ಮಾಡುತ್ತದೆ. ಅದು ರಾಜ ರಘುವಂಶಿ ಮೃತದೇಹವೆಂದು ಕುಟುಂಬದವರು ಗುರುತಿಸುತ್ತಾರೆ. ಸೋನಮ್‌ಗಾಗಿ ಹುಟುಕಾಟ ಮುಂದುವರೆದಿತ್ತು. ಕೊಲೆಗೆ ಕಾರಣ ಏನೆಂದು ಇನ್ನಷ್ಟೇ ತಿಳಿದುಬರಬೇಕಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

9 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

11 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago