ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು
ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು(ten month baby) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ(Mangalore) ಶನಿವಾರ ಮಧ್ಯಾಹ್ನ ನಡೆದಿದೆ.
ಅಡ್ಯಾರ್ನಲ್ಲಿ ವಾಸವಾಗಿದ್ದ ಬಿಹಾರ(Bihar) ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ.
ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಅಪರಾಹ್ನ 3:30ಕ್ಕೆ ಮಗುವನ್ನು ವೆನ್ಲಾಕ್(venlak hospital) ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 10:25ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…