ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ
ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ದುಬಾರಿ ದಂಡ ವಿಧಿಸಿದ್ಧಾರೆ. ಇತ್ತೀಚೆಗೆಷ್ಟೆ ಕಾರು ಮಾಲೀಕರೊಬ್ಬರಿಗೆ ವಿವಿಧ ಪ್ರಕರಣಗಳಲ್ಲಿ ಕಾಯ್ದೆ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ 27 ಸಾವಿರ ದಂಡ ವಿಧಿಸಿದ್ದ ಟ್ರಾಫಿಕ್ ಪೊಲೀಶರು ನಿನ್ನೆ ಅಂದರೆ ದಿನಾಂಕ ಜೂನ್ 23, 2025 ರಂದು ವಾಹನ ತಪಾಸಣೆ ವೇಳೆ, ಆಂಬುಲೆನ್ಸ್ ಚಾಲಕನಿಗೆ ಡ್ರಂಕ್ & ಡ್ರೈವ್ ಆರೋಪದ ಅಡಿಯಲ್ಲಿ ಕೋರ್ಟ್ ಮೂಲಕ 13,000 ರೂಪಾಯಿ ದಂಡ ವಿಧಿಸಿದೆ.
ನಗರದ ಐ.ಬಿ. ವೃತ್ತದಲ್ಲಿ ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ತಿರುಮಲೇಶ್ ಮತ್ತು ಅವರ ಸಿಬ್ಬಂದಿ ವಾಹನ ತಪಾಸಣೆಯ ಸಂದರ್ಭದಲ್ಲಿ ಆಂಬುಲೆನ್ಸ್ ಒಂದನ್ನು ತಡೆದು ನಿಲ್ಲಿಸಿ ಚಾಲಕನನ್ನು ಡ್ರಂಕ್ & ಡ್ರೈವ್ ಪರೀಕ್ಷೆಗೆ ಒಳಪಡಿಸಿದ್ದರು. ಈ ವೇಳೆ ಚಾಲಕ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ.
ಅಲ್ಲದೆ ವಾಹನ ಇನ್ಸುರೆನ್ಸ್ ಸಹ ಲ್ಯಾಪ್ಸ್ ಆಗಿದ್ದ ಹಿನ್ನೆಲೆಯಲ್ಲಿ ಈ ಸಂಬಂಧ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಕೋರ್ಟ್ 13,000 ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್