ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ
ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ
ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು.
ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ ಸಭಾ ಸದಸ್ಯ ಟಿಪ್ ಟಾಪ್ ಬಷೀರ್ ರವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ರೇಡ್ ನಡೆಸಿದ್ದಾರೆ.
ಒಟ್ಟು 7 ಅಧಿಕಾರಿಗಳು ಸಾಗರದ ಬಷೀರ್ ಮನೆಯಲ್ಲಿ 18 ಗಂಟೆಗಳ ಕಾಲ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಂತರ ಸಂಬಂಧಪಟ್ಟ ದಾಖಲೆಗಳನ್ನು ತೆಗೆದುಕೊಂಡು ಬಷೀರ್ರವರಿಗೆ ನೋಟಿಸ್ ಕೊಟ್ಟು ಬುಧವಾರ ಬರುವಂತೆ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಬಷೀರ್ ಇ ಡಿ ಅಧಿಕಾರಿಗಳು ಹೋಟೆಲ್ ವ್ಯವಹಾರದ ಬಗ್ಗೆ ಹಾಗೂ ಅದರಲ್ಲಿ ಪಾಲುದಾರಿಕೆ ಹೊಂದಿದ್ದ ನಾವುಂದ ಇಕ್ಬಾಲ್ ಅವರ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಉದ್ಯಮಿ ಬಶೀರ್ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply