ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ
ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗ ರಸ್ತೆಯ ಹೆಚ್ ಪಿ ಪೆಟ್ರೋಲ್ ಬಂಕ್ ಬಳಿ ಬಸ್ವೊಂದಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಕೆಂಚನಾಲ ಸಮೀಪದ ಕಮದೂರು ಗ್ರಾಮದ ನಾಗರಾಜ್ ನಾಯ್ಕ್ (47) ಎಂದು ಗುರುತಿಸಲಾಗಿದೆ.ಇವರು ಅರಣ್ಯ ಇಲಾಖೆಯಲ್ಲಿ ವಾಚರ್ ಕೆಲಸ ನಿರ್ವಹಿಸುತಿದ್ದಾರೆ.
ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ಪಿಎಸ್ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್