ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ
ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ನಿಟ್ಟೂರು ಭಾಗದಲ್ಲಿ ಮುಂಗಾರು ಮಳೆ ರಭಸವಾಗಿ ಸುರಿಯುತ್ತಿರುವುದು ಮುಂದುವರೆದಿರುವುದು ವರದಿಯಾಗಿದ್ದು ಈ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರೊಂದಿಗೆ ಚರ್ಚಿಸಿದ್ದು, ಅವರ ಸೂಚನೆಯಂತೆ, ಇದೇ ರೀತಿ ಪರಿಸ್ಥಿತಿ ತಾಲ್ಲೂಕಿನ ಕೆಲವು ಭಾಗದಲ್ಲಿಯೂ ಇರುವ ಕಾರಣ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುವ ಪರಿಸ್ಥಿತಿಯಿದ್ದಲ್ಲಿ ಎಸ್ ಡಿಎಂಸಿ ಯವರೊಂದಿಗೆ ಚರ್ಚಿಸಿ ರಜೆ ನೀಡಲು ಕ್ರಮವಹಿಸಲು ತಾಲೂಕಿನ ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರಿಗೆ ಬಿ ಇಒ ಕೃಷ್ಣಮೂರ್ತಿ ಸೂಚನೆ ನೀಡಿದ್ದಾರೆ.
ಮಳೆಯ ಹಿನ್ನೆಲೆಯಲ್ಲಿ ರಜೆ ನೀಡಿರುವ ಬಗ್ಗೆ ಎಲ್ಲಾ ಪೋಷಕರು ಮತ್ತು ಮಕ್ಕಳಿಗೆ ಮೊದಲೇ ಮಾಹಿತಿ ನೀಡುವುದು.ಈ ಸೂಚನೆಯನ್ನು ಮುಂದಿನ ಮಳೆಗಾಲ ಮುಗಿಯುವವರೆಗೂ ಕಡ್ಡಾಯವಾಗಿ ಪಾಲಿಸುವುದು ಮತ್ತು ಈ ಬಗ್ಗೆ ಕಛೇರಿಗೆ ವರದಿಮಾಡುವುದು ಮುಂದೆ ಈ ಕೊರತೆಯನ್ನು ಮಂದಿನ ಶನಿವಾರ ಪೂರ್ಣ ದಿನ ಶಾಲೆ ನಡೆಸುವುದರ ಮೂಲಕ ಸರಿದೂಗಿಸಲು ಶಾಲಾ ಮುಖ್ಯೋಪಾಧ್ಯಾಯರುಗಳಿಗೆ ಬಿಇಒ ಕೃಷ್ಣಮೂರ್ತಿ ಸೂಚನೆ ನೀಡಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…