ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್
ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೇಲಿನಸಂಪಳ್ಳಿ ಗ್ರಾಮದ ವಿಜಾಪುರ ನಿವಾಸಿ ರಾಮಚಂದ್ರ ಬಿನ್ ಹುಚ್ಚಾನಾಯ್ಕ ಬಂಧಿತ ಆರೋಪಿ. ಈತನ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (prevention of cruelty to animals act) ರ ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಘಟನೆ ಹಿನ್ನಲೆ ಏನು?
ವಿಜಾಪುರ ನಿವಾಸಿ ನವೀನ್ ಶೆಟ್ಟಿ ಎಂಬುವರಿಗೆ ಸೇರಿದ ಹಸುಗಳನ್ನು ಜೂನ್ 28 ರಂದು ಎಂದಿನಂತೆ ಮೇಯಲು ಬಿಡಲಾಗಿತ್ತು. 4:00 ಗಂಟೆ ಸುಮಾರಿಗೆ ಹಸುವೊಂದರ ಕೆಚ್ಚಲು ಕತ್ತರಿಸಿದ್ದು ಕಂಡುಬಂದಿತ್ತು. ಈ ಕುರಿತಂತೆ ಭಾನುವಾರ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿ ರಾಮಚಂದ್ರ ಕತ್ತಿ ಹಾಗೂ ದೊಣ್ಣೆಯಿಂದ ಹೊಡೆದು, ಹಸುವಿನ ಕೆಚ್ಚಲು ಗಾಯಪಡಿಸಿದ್ದು ಪತ್ತೆಯಾಗಿತ್ತು. ಆರೋಪಿಯ ತೋಟಕ್ಕೆ ದನಗಳು ನುಗ್ಗುತ್ತಿದ್ದು, ಇದರಿಂದ ಆಕ್ರೋಶಗೊಂಡು ಈ ಕೃತ್ಯ ನಡೆಸಿರುವುದಾಗಿ ಎಂದು ತಿಳಿದುಬಂದಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…