ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!?
ಶಿವಮೊಗ್ಗ: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ.
ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ ಜೂನ್ 15ರಂದು ನಡೆದ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದಿರುವ ಘಟನೆ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್ಗೆ ಉತ್ತರ ನೀಡುವಂತೆ ಸೂಚಿಸಿದೆ.
ಕಾಂತಾರ ಚಿತ್ರತಂಡವು ಸಿನಿಮಾ ಚಿತ್ರೀಕರಣಕ್ಕಾಗಿ ವಿವಿಧ ಇಲಾಖೆಗಳಿಂದ ಪಡೆದ ಅನುಮತಿಯ ವಿವರಗಳು ಹಾಗೂ ದಾಖಲಾತಿಗಳನ್ನು ತಹಸಿಲ್ದಾರರಿಗೆ ಸಲ್ಲಿಸಬೇಕಿದೆ. ಈ ಕುರಿತು ತಾಲೂಕು ಹಾಗೂ ಜಿಲ್ಲಾ ಆಡಳಿತಕ್ಕೆ ಯಾವುದೇ ಮಾಹಿತಿ ನೀಡದೇ ಚಿತ್ರೀಕರಣ ನಡೆಸಿರುವ ಆರೋಪ ಚಿತ್ರತಂಡದ ಮೇಲೆ ಮೂಡಿದೆ.
ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…
ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…
ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…
ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…
ರಿಪ್ಪನ್ಪೇಟೆ ಪೊಲೀಸ್ ಜೀಪ್ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…