RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ.

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ.

ತೀರ್ಥಹಳ್ಳಿ – ರಿಪ್ಪನ್ ಪೇಟೆ ಹೆದ್ದಾರಿಯಲ್ಲಿರುವ ಅಬ್ಬಾಸ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ಅಬ್ಬಾಸ್ ಕುಟುಂಬದವರು ಶನಿವಾರ ಮಧ್ಯಾಹ್ನ ಸಾಗರದ ಕುಟುಂಬಸ್ಥರ ಮನೆಗೆ ತೆರಳಿದಾಗ ಈ ಘಟನೆ ನಡೆದಿದೆ.

ಶನಿವಾರ ರಾತ್ರಿ ಮನೆಗೆ ಬಂದಾಗ ಮನೆಯ ಬಾಗಿಲಿನ ಬೀಗ ಮುರಿದು ಹಾಕಿರುವುದು ಕಂಡುಬಂದಿತ್ತು ತಕ್ಷಣ ಮನೆಯೊಳಗೆ ಹೋಗಿ‌ ನೋಡಿದಾಗ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ.

ತಕ್ಷಣ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ತೆರಳಿದ ರಿಪ್ಪನ್‌ಪೇಟೆ ಪೊಲೀಸ್ ಸಿಬ್ಬಂದಿಗಳ ತಂಡ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

5 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

6 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

6 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

11 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

12 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

15 hours ago