RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ
ರಿಪ್ಪನ್ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ.
ತೀರ್ಥಹಳ್ಳಿ – ರಿಪ್ಪನ್ ಪೇಟೆ ಹೆದ್ದಾರಿಯಲ್ಲಿರುವ ಅಬ್ಬಾಸ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ಅಬ್ಬಾಸ್ ಕುಟುಂಬದವರು ಶನಿವಾರ ಮಧ್ಯಾಹ್ನ ಸಾಗರದ ಕುಟುಂಬಸ್ಥರ ಮನೆಗೆ ತೆರಳಿದಾಗ ಈ ಘಟನೆ ನಡೆದಿದೆ.
ಶನಿವಾರ ರಾತ್ರಿ ಮನೆಗೆ ಬಂದಾಗ ಮನೆಯ ಬಾಗಿಲಿನ ಬೀಗ ಮುರಿದು ಹಾಕಿರುವುದು ಕಂಡುಬಂದಿತ್ತು ತಕ್ಷಣ ಮನೆಯೊಳಗೆ ಹೋಗಿ ನೋಡಿದಾಗ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ.
ತಕ್ಷಣ ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ತೆರಳಿದ ರಿಪ್ಪನ್ಪೇಟೆ ಪೊಲೀಸ್ ಸಿಬ್ಬಂದಿಗಳ ತಂಡ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…