ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ
ಶಿವಮೊಗ್ಗ : ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್ ಮರ ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್ ಪೋಸ್ಟ್ ಸಮೀಪ ಮರ ಬುಡಮೇಲಾಗಿದೆ. ಚೆಕ್ ಪೋಸ್ಟ್ನ ಬಳಿಯಿದ್ದ ಬೃಹತ್ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.
ಮರ ಉರುಳುವಾಗ ಅದೃಷ್ಟವಶಾತ್ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ.
ಈಗ ಹೆದ್ದಾರಿ ಪಕ್ಕದಲ್ಲಿರುವ ಕಿರಿದಾದ ದಾರಿಯ ಮೂಲಕ ವಾಹನಗಳು ಸಂಚರಿಸುತ್ತಿವೆ. ಸದ್ಯ ಆಲದ ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಇನ್ನು, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಹಲವು ಕಡೆ ಗಾಳಿ ಸಹಿತ ಮಳೆಯಾಗುತ್ತಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…