ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.
ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ.
ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ ಬಗ್ಗೆ ಪೊಲೀಸರಿಗೆ ಸುಳಿವು ಲಭ್ಯವಾಗಿ, ಆತನನ್ನು ಹುಡುಕಾಡುತ್ತಿದ್ದರು. ಇಂದು ಬೆಳಗ್ಗೆ ಆತನನ್ನು ಬಂಧಿಸಲು ತೆರಳಿದ್ದ ವೇಳೇ, ಮಂಜ ಪೊಲೀಸ್ ಸಿಬ್ಬಂದಿ ದ್ಯಾಮಪ್ಪ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.
ಈ ಸಂದರ್ಭದಲ್ಲಿ, ಜಯನಗರ ಪಿಎಸ್ಐ ನವೀನ್ ಬ್ಯಾಕೋಡ್ ಮೊದಲು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಆತನ ಕಾಲಿಗೆ ಬುಲೆಟ್ ಫೈರ್ ಮಾಡಿದ್ದಾರೆ. ಕಲ್ಕೆರೆ ಮಂಜನ ಎಡಗಾಲಿಗೆ ಗುಂಡು ತಗುಲಿದ್ದು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಘಟನೆಯಲ್ಲಿ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ದ್ಯಾಮಪ್ಪರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್