ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ
ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ್ ದೇವಸ್ಥಾನದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಜಯಂತೋತ್ಸವಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿದರು.
ಭಾರತೀಯ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಅವರು ಒಬ್ಬರಾಗಿದ್ದರು. ಎಂದು ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರು ಹೇಳಿದರು. ಪ್ರತಾಪ್ ಸಿಂಹ ಅವರು ಅಪ್ರತಿಮ ದೇಶಭಕ್ತರಾಗಿ ಮೊಘಲ್ ಸಾಮ್ರಾಜ್ಯದ ಅಕ್ಬರ್ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ರಜಪೂತ್ ವಂಶದ ಕೆಚ್ಚೆದೆಯ ಕುಡಿಯಾಗಿದ್ದರು. ಅವರ ಧೈರ್ಯ, ತ್ಯಾಗ,ದೇಶಭಕ್ತಿ ಭಾರತೀಯ ಯುವ ಸಮೂಹಕ್ಕೆ ಸ್ಫೂರ್ತಿದಾಯಕವಾಗಿದ್ದು. ಅವರ ಮಾತೃಭೂಮಿ ಮೇಲಿರುವ ನಿಷ್ಠೆಗೆ, ಹಳದಿ ಘಾಟ್ ಕದನವೇ ಸಾಕ್ಷಿಯಾಗಿ ನಿಂತಿದೆ. ಅವರ ಭಾವಚಿತ್ರ ನೋಡಿದರೆ ಯುವಕರ ಮೈಮನ ಇಂದಿಗೂ ರೋಮಾಂಚನವಾಗುತ್ತದೆ ಎಂದು ಹೇಳಿದರು.
ಹರೀಶ ಸಿಂಗ್ ಭವಾನಿ ಸಭೆಯ ಅಧ್ಯಕ್ಷತೆ ವಹಿಸಿದರು, ಮಾಜಿ ಪುರಸಭೆ ಸದಸ್ಯ ಮಾಲತೇಶ್ ಬಾಬುಸಿಂಗನವರ್, ರತನ್ ಟೋಪಣ್ಣವರ್, ನಾರಾಯಣಸಿಂಗ್ ಬಾಬುಸಿಂಗನವರ್, ನಾರಾಯಣ ಸಿಂಗ್ ದೊಡ್ಡಮನಿ, ರಾಘುಸಿಂಗ್ ಬಾಬುಸಿಂಗನವರ್, ಧರ್ಮಸಿಂಗ್ ಡಂಬಳ್, ಭರತಸಿಂಗ್ ಚೌವ್ಹಿ, ಅರ್ಜುನ್ ಸಿದ್ದಪ್ಪನವರ್, ದುರ್ಗಾ ಸಿಂಗ್ ಕಲಘಟಗಿ, ನೇತಾಜಿ ಜಾದವ್, ನಾಗರಾಜ್ ಶಿವಪ್ಪನವರ್, ಪವನ್ ಸಿಂಗ್ ತೆರಸನ್ನವರ್ ಮುಂತಾದ ಉಪಸ್ಥಿತರಿದ್ದರು.
ವರದಿ : ನಿಂಗರಾಜ ಕುಡಲ್ ಹಾವೇರಿ ಜಿಲ್ಲೆ ಬಂಕಾಪುರ
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…