ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ
ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕ್ಷೇತ್ರದ ಮನೆ, ರಸ್ತೆಗಳು ಹಾನಿಗೊಂಡಿವೆ.ಸದರಿ ಪ್ರದೇಶಗಳಿಗೆ ತತ್ತಕ್ಷಣ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಳೆ ಮತ್ತು ಗಾಳಿ ವ್ಯಾಪಕವಾಗುತ್ತಿರುವುದರಿಂದ ಮನೆ ಹಾನಿಯಾದರೆ /ಇತರೆ ಹಾನಿಯಾದರೆ ಕೂಡಲೇ VA, RI ಹಾಗೂ ಪಿಡಿಒಗಳು ಸೇರಿದಂತೆ ಇತರೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.
ಇನ್ನೂ ಮಳೆ ಹಾನಿ ಪರಿಹಾರಕ್ಕೆ ವರದಿ ಸಲ್ಲಿಸಿ, ಮಾಹಿತಿಯನ್ನು ಕಛೇರಿಗೆ ನೀಡಿ, ಹೆಚ್ಚಿನ ಮನೆ ಹಾನಿಯಾಗಿದ್ದಲ್ಲಿ ಪಂಚಾಯಿತಿವತಿಯಿಂದ ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ನೀಡಿದ್ದಾರೆ.
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…