ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ
ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕ್ಷೇತ್ರದ ಮನೆ, ರಸ್ತೆಗಳು ಹಾನಿಗೊಂಡಿವೆ.ಸದರಿ ಪ್ರದೇಶಗಳಿಗೆ ತತ್ತಕ್ಷಣ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಳೆ ಮತ್ತು ಗಾಳಿ ವ್ಯಾಪಕವಾಗುತ್ತಿರುವುದರಿಂದ ಮನೆ ಹಾನಿಯಾದರೆ /ಇತರೆ ಹಾನಿಯಾದರೆ ಕೂಡಲೇ VA, RI ಹಾಗೂ ಪಿಡಿಒಗಳು ಸೇರಿದಂತೆ ಇತರೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.
ಇನ್ನೂ ಮಳೆ ಹಾನಿ ಪರಿಹಾರಕ್ಕೆ ವರದಿ ಸಲ್ಲಿಸಿ, ಮಾಹಿತಿಯನ್ನು ಕಛೇರಿಗೆ ನೀಡಿ, ಹೆಚ್ಚಿನ ಮನೆ ಹಾನಿಯಾಗಿದ್ದಲ್ಲಿ ಪಂಚಾಯಿತಿವತಿಯಿಂದ ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ನೀಡಿದ್ದಾರೆ.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…