ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ
ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕ್ಷೇತ್ರದ ಮನೆ, ರಸ್ತೆಗಳು ಹಾನಿಗೊಂಡಿವೆ.ಸದರಿ ಪ್ರದೇಶಗಳಿಗೆ ತತ್ತಕ್ಷಣ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಳೆ ಮತ್ತು ಗಾಳಿ ವ್ಯಾಪಕವಾಗುತ್ತಿರುವುದರಿಂದ ಮನೆ ಹಾನಿಯಾದರೆ /ಇತರೆ ಹಾನಿಯಾದರೆ ಕೂಡಲೇ VA, RI ಹಾಗೂ ಪಿಡಿಒಗಳು ಸೇರಿದಂತೆ ಇತರೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.
ಇನ್ನೂ ಮಳೆ ಹಾನಿ ಪರಿಹಾರಕ್ಕೆ ವರದಿ ಸಲ್ಲಿಸಿ, ಮಾಹಿತಿಯನ್ನು ಕಛೇರಿಗೆ ನೀಡಿ, ಹೆಚ್ಚಿನ ಮನೆ ಹಾನಿಯಾಗಿದ್ದಲ್ಲಿ ಪಂಚಾಯಿತಿವತಿಯಿಂದ ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ನೀಡಿದ್ದಾರೆ.
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…