ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ
ದೇವಸ್ಥಾನದ ಅಭಿವೃದ್ದಿಗೆ ಮಾತೃಶ್ರೀ ಹೆಸರಿನಲ್ಲಿ ವೈಯಕ್ತಿಕ 10 ಲಕ್ಷ ದೇಣಿಗೆ ನೀಡಿದ ಬಿವೈಆರ್
ರಿಪ್ಪನ್ ಪೇಟೆ : ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ದರ್ಶನಕ್ಕೆ ಭಕ್ತರು ಮೆಟ್ಟಿಲ ಮೇಲೆ ನಡೆದು ಬರುವಾಗ ಸಂಸದರ ಹೆಸರು ನೆನಪು ಮಾಡಿಕೊಳ್ಳುತ್ತಾ ನಮಗೆ ಸದಾ ಆಶೀರ್ವಾದ ಮಾಡಲಿ ಎಂಬ ಉದ್ದೇಶದಿಂದ ನಮ್ಮ ಮಾತೃಶ್ರೀಯವರ ಹೆಸರಿನಲ್ಲಿ 10 ಲಕ್ಷ ರೂ. ಹಣವನ್ನು ದೇಣಿಗೆ ನೀಡುತ್ತಿರುವುದಾಗಿ ಭಕ್ತರ ಸಮ್ಮುಖದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ, ಮಾಜಿ ಶಾಸಕ ಬಿ.ಸ್ವಾಮಿರಾವ್ರಿಗೆ ಸಮರ್ಪಿಸಿದರು.
ಹಿರಿಯರಾದ ಬಿ.ಸ್ವಾಮಿರಾವ್ ಇವರು ಕಳೆದ ಮೂರು ವರ್ಷದ ಹಿಂದೆ ಅಮ್ಮನಘಟ್ಟ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ದೇವಿಯ ಸನ್ನಿಧಿಯಲ್ಲಿ ಸಂಕಲ್ಪಿಸಿದಂತೆ ಇಂದು ಶಿಲಾಮಯ ದೇವಸ್ಥಾನ ಸುಸಜ್ಜಿತ ಕಟ್ಟಡ ನಿರ್ಮಾಣದೊಂದಿಗೆ ಲೋಕಾರ್ಪಣೆಯಾಗುತ್ತಿದ್ದು ಮುಂದೊಂದು ದಿನ ಈ ಕ್ಷೇತ್ರ ಪ್ರವಾಸಿ ಕ್ಷೇತ್ರವಾಗುವುದರಲ್ಲಿ ಸಂದೇಹವಿಲ್ಲ ಎಂದ ಅವರು, ಸರ್ಕಾರದಿಂದ ಈ ಹಿಂದೆ 3 ಕೋಟಿ ರೂ. ಅನುದಾನ ಬಿಡುಗಡೆಯಾಗುವ ಮೂಲಕ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಲಾಗಿತ್ತು. ಆದರೆ ಸರ್ಕಾರ ಬದಲಾದ ಕಾರಣ ಬಿಡುಗಡೆಯಾದ ಅನುದಾನವನ್ನು ನೀಡುವಲ್ಲಿ ವಿಳಂಬ ಧೋರಣೆ ತಾಳಿದೆ ಎಂದು ಹೇಳಿ, ಮುಂದಿನ ದಿನಗಳಲ್ಲಿ ಆ ಅನುದಾನ ದೇವಸ್ಥಾನ ಅಭಿವೃದ್ದಿ ಕಾರ್ಯಕ್ಕೆ ಸಮರ್ಪಕವಾಗಿ ಸದ್ಬಳಕೆಯಾಗಲೆಂದರು.
ಶಿಲನ್ಯಾಸ ಸಮಾರಂಭದ ಅಧ್ಯಕ್ಷತೆಯನ್ನು ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅದ್ಯಕ್ಷ ಬಿ.ಸ್ವಾಮಿರಾವ್ ವಹಿಸಿದ್ದರು.
ಬಾವುಕರಾದ ಬಿ.ಸ್ವಾಮಿರಾವ್ !
ಪುರಾಣ ಪ್ರಸಿದ್ದ ಶ್ರೀ ಅಮ್ಮನಘಟ್ಟ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸಾಕಷ್ಟು ಅಭಿವೃದ್ದಿಪಡಿಸುವ ಮಹಾದಾಸೆ ಹೊಂದಿದ್ದು ಆದರೆ ಸರ್ಕಾರ ಹಣವನ್ನು ಇಂದಿನ ಸರ್ಕಾರ ತಡೆಹಿಡಿದರೂ ಕೂಡಾ ಧೈರ್ಯವಾಗಿ ಭಕ್ತರ ನೆರವಿನೊಂದಿಗೆ ಕ್ಷೇತ್ರದ ಸಮಗ್ರ ಅಭಿವೃದ್ದಿಯೊಂದಿಗೆ ಶಿಲಾಮಯ ಕಟ್ಟಡವನ್ನು ನಿರ್ಮಿಸಲು ಸಹಕರಿಸಿದ ಭಕ್ತರ ಮತ್ತು ಸಂಸದರ ಸಹಕಾರವನ್ನು ಸ್ಮರಿಸಿ ಬಾವುಕರಾದರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ದಿಗಾಗಿ ಶ್ರಮಿಸಿದ ಹಿರಿಯ ಚೇತನಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಸನ್ಮಾನಿಸಿ ಅಭಿನಂದಿಸಿದರು.
ಈ ಸಂಧರ್ಭದಲ್ಲಿ ತಾಪಂಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ , ಕೋಡೂರು ಗ್ರಾಮ ಪಂಚಾಯಿತ್ ಅಧ್ಯಕ್ಷ ಜಯಪ್ರಕಾಶ, ವ್ಯವಸ್ಥಾಪನಾ ಸಮಿತಿಯ ಪುಟ್ಟಪ್ಪ, ದೇವರಾಜ, ಹರೀಶ್, ಶ್ರೀನಿವಾಸ ಹಿಂಡ್ಲೆಮನೆ, ರತ್ನಮ್ಮ, ಸುಧೀರ್ಭಟ್, ಕೋಡೂರು ವಿಜೇಂದ್ರರಾವ್ ಹಾಗೂ ಹೊಸನಗರ ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಮತ್ತಿಮನೆ ಕೆ.ವಿ.ಸುಬ್ರಹ್ಮಣ್ಯ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾದ ಸುರೇಶ ಸ್ವಾಮಿರಾವ್, ಬಿ.ಎಸ್. ಪುರುಷೋತ್ತಮ್ರಾವ್ ಬಿದರಹಳ್ಳಿ, ಮುಖಂಡರಾದ ಎ.ವಿ.ಮಲ್ಲಿಕಾರ್ಜುನ, ಬಿ.ಯುವರಾಜ್,ಕಗ್ಗಲಿ ಲಿಂಗಪ್ಪ , ಹಾಲಗದ್ದೆ ಉಮೇಶ್, ರಾಮಚಂದ್ರ ಹರತಾಳು, ಲೇಖನ ಚಂದ್ರನಾಯ್ಕ್, ತೀರ್ಥೇಶ್ , ಕಲ್ಯಾಣಪ್ಪಗೌಡ, ಮಂಡಾನಿ ಮೋಹನ್, ಇನ್ನಿತರರು ಹಾಜರಿದ್ದರು.
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…