RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ
ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು.
ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು.
ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫೀ ಮಾತನಾಡಿ, ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು.
ರಿಪ್ಪನ್ ಪೇಟೆಯಲ್ಲಿ ಮಳೆ ಹಿನ್ನಲೆಯಲ್ಲಿ ಮೆರವಣಿಗೆಯನ್ನು ಸ್ಥಗಿತಗೊಳಿಸಿ ಗುಂಪು ಗುಂಪಾಗಿ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ,ಪರಸ್ಪರ ಶುಭಾಶಯಗಳು ಕೋರಿದರು.
ಈ ಸಂಧರ್ಭದಲ್ಲಿ ಮೊಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷರಾದ ಹಸನಬ್ಬ ಬ್ಯಾರಿ ,ಕಾರ್ಯದರ್ಶಿ ಶೇಖಬ್ಬ ಮುಖಂಡರಾದ ಅರ್ ಎ ಚಾಬುಸಾಬ್, ಅಮೀರ್ ಹಂಜಾ,ಆಸೀಫ಼್ ಭಾಷಾಸಾಬ್,ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ , ಮುಸ್ತಾಫ,ಫ಼ಾಜಿಲ್ ,ರೆಹಮಾನ್, ನದೀಮ್ , ರಹೀಮ್ ಚಾಲಿ , ಫೈಜಲ್ ,ಸಲೀಂ , ಅಫ಼್ಜಲ್ ಬ್ಯಾರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಇದೇ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ನೇಮಕಗೊಂಡ ಮುಖಂಡರಾದ ಅಮೀರ್ ಹಂಜಾ ರವರನ್ನು ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯರಾದ ಆಸೀಫ಼್ ಭಾಷಾ ಹಾಗೂ ನಿರೂಪ್ ಕುಮಾರ್ ರವರ 15 ನೇ ಹಣಕಾಸು ಯೋಜನೆ ಹಾಗೂ ವರ್ಗ 1 ರ ಅನುದಾನದಡಿಯಲ್ಲಿ ಸಾಗರ ರಸ್ತೆಯ ಮುಸ್ಲಿಂ ಸ್ಮಶಾನದಲ್ಲಿ ನಿರ್ಮಿಸಿರುವ ಸುಸಜ್ಜಿತ ಹೈಟೆಕ್ ಹೈಮಾಸ್ಕ್ ಲೈಟ್ ನ್ನು ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫಿ ಸ್ವಿಚ್ ಆನ್ ಮಾಡುವ ಮೂಲಕ ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಮುಖಂಡರಾದ ಅರ್ ಎ ಚಾಬುಸಾಬ್, ಅಮೀರ್ ಹಂಜಾ,ಆಸೀಫ಼್ ಭಾಷಾಸಾಬ್, ನಿರೂಪ್ ಕುಮಾರ್ , ಮುಸ್ತಾಫ ಹಾಗೂ ಇನ್ನಿತರರು ಇದ್ದರು.
ರಿಪ್ಪನ್ಪೇಟೆ ಸಮೀಪದ ಗಾಳಿಬೈಲು ಗ್ರಾಮದ ಈದ್ಗಾ ಮೈದಾನದಲ್ಲಿ ಬಕ್ರೀದ್ ಸಂಭ್ರಮದಿಂದ ಆಚರಿಸಿದರು.ಗಾಳಿಬೈಲ್ ಜುಮ್ಮಾ ಮಸೀದಿ ಧರ್ಮಗುರುಗಳ ನೇತೃತ್ವದಲ್ಲಿ ಗಾಳಿಬೈಲ್ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮುಖಂಡರಾದ ಷರೀಫ್ ಸಾಬ್, ಜಾವಿದ್ ಸಾಬ್ , ಘನಿಸಾಬ್,ವಜೀರ್ ಸಾಬ್,ಉಬೇದುಲ್ಲಾ ಷರೀಫ್, ಸೈಫ಼ುಲ್ಲಾ ,ಹಿದಾಯತ್,ಶಬ್ಬೀರ್ ಸಾಬ್ ,ಖಲೀಲ್ ಷರೀಫ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಬಕ್ರೀದ್ ಹಿನ್ನಲೆಯಲ್ಲಿ ಹೊಸನಗರ, ಬಟ್ಟೆಮಲ್ಲಪ್ಪ, ಕೆಂಚನಾಲ, ಗರ್ತಿಕೆರೆ, ಸುಣ್ಣದ ಬಸ್ತಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…