ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್

ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ.

ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ। ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ ವೇಳೆ ಬಾಡಿ ವೋರ್ನ್‌ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಧರಿಸಿರಬೇಕು. ರಸ್ತೆಯಲ್ಲಿ ದಿಢೀರನೇ ಬಂದು ವಾಹನಗಳನ್ನು ಅಡ್ಡಗಟ್ಟುವುದಾಗಲಿ ಅಥವಾ ವಾಹನಗಳ ಕೀ ಕೈ ತೆಗೆದುಕೊಳ್ಳವುದಾಗಲಿ ಮಾಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ಸೂಚನೆಗಳು
1.ಸಕಾರಣವಿಲ್ಲದೆ ದಾಖಲೆಗಳನ್ನು ಪರೀಕ್ಷಿಸಲು ವಾಹನಗಳನ್ನು ಪೊಲೀಸರು ತಡೆದು ತಪಾಸಣೆಗೊಳಪಡಿಸಬಾರದು.

2. ಕಣ್ಣಿಗೆ ಕಾಣುವ (Visible violations) ಸಂಚಾರ ನಿಯಮ ಉಲ್ಲಂಘನೆಗಳು ಕಂಡು ಬಂದಲ್ಲಿ ಮಾತ್ರ ವಾಹನ ತಡೆ ತಪಾಸಣೆ ನಡೆಸಬೇಕು. ಪ್ರಕರಣಗಳನ್ನು ದಾಖಲಿಸುವಾಗ ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳುವುದು.

(ಅ) ಹೆದ್ದಾರಿಗಳಲ್ಲಿ ಝಿಗ್‌ ಝಾಗ್ ಮಾದರಿಯಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ವಾಹನಗಳನ್ನು ತಡೆಯಬಾರದು. (ಆ) ರಸ್ತೆಯಲ್ಲಿ ದಿಢೀರನೆ ಅಡ್ಡ ಬಂದು ವಾಹನ ನಿಲ್ಲಿಸುವಂತೆ ಹೇಳಬಾರದು. (ಇ)ಬೈಕ್‌ನ ಹಿಂಬದಿ ಸವಾರ (Pillion rider) ನನ್ನು ಹಿಡಿದು ಎಳೆಯುವುದು ಹಾಗೂ ವಾಹನಗಳ ಕೀಲಿ ಕೈ ಕಿತ್ತುಕೊಳ್ಳಬಾರದು.

3.ವೇಗವಾಗಿ ಚಲಾಯಿಸಿಕೊಂಡು ಬರುವ ವಾಹನ ಸವಾರರನ್ನು ಬೆನ್ನಟ್ಟಿ ಹಿಡಿಯಬಾರದು. ಆ ವಾಹನಗಳ ನೋಂದಣಿ ಸಂಖ್ಯೆಯನ್ನು ಆಧರಿಸಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಬೇಕು.

4.ಸಂಚಾರ ನಿಯಮ ಉಲ್ಲಂಘನೆದಾರರ ವಿರುದ್ಧ ಪ್ರಕರಣ ದಾಖಲಿಸುವಾಗ ಅಥವಾ ವಾಹನಗಳ ತಪಾಸಣೆ ಮಾಡುವ ಸಂದರ್ಭದಲ್ಲಿ ತಮ್ಮ ಸುರಕ್ಷತೆಗೆ ರಿಫ್ಲೇಕ್ಟಿವ್‌ ಜಾಕೆಟ್‌ಗಳನ್ನು ಪೊಲೀಸರು ಧರಿಸಬೇಕು. ಸಂಜೆ ವೇಳೆ ಕಡ್ಡಾಯವಾಗಿ ಎಲ್‌ಇಡಿ ಬ್ಯಾಟನ್ ಗಳನ್ನು ಉಪಯೋಗಿಸಬೇಕು ಹಾಗೂ ಕಡ್ಡಾಯವಾಗಿ ಬಾಡಿ ವೋರ್ನ್‌ ಕ್ಯಾಮೆರಾ ಧರಿಸಬೇಕು.

5.ಸಂಚಾರ ನಿರ್ವಹಣಾ ಕೇಂದ್ರ ಅಥವಾ ಇಂಟೆಲಿಜೆಟ್‌ ಸಂಚಾರ ನಿರ್ವಹಣಾ ವ್ಯವಸ್ಥೆ (ಐಟಿಎಂಎಸ್‌) ಘಟಕದವು ಸಂಪರ್ಕ ರಹಿತಾ ಪ್ರವರ್ತನಾ ಮೂಲಕ ಪ್ರಕರಣಗಳನ್ನು ದಾಖಲಿಸಬೇಕು.

6.ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಕುರಿತು ಜನ ಜಾಗೃತಿ ಅಭಿಯಾನ ನಡೆಸಬೇಕು.

7.ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಸೇರಿ ಇತರೆ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಅತಿ ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡಬಾರದು. ಇಂತಹ ವಾಹನಗಳ ವಿರುದ್ಧ ಎಸ್‌ಟಿವಿಆರ್ ದಾಖಲಿಸಲು ತಂತ್ರಜ್ಞಾನ ಆಧಾರಿತ ನಿಯಮಗಳನ್ನು ಅನುಸರಿಬೇಕು.

8.ವಾಹನಗಳ ವೇಗವನ್ನು ಇಳಿಸುವ ಸಲುವಾಗಿ, ತಪಾಸಣೆಯ ಸ್ಥಳದ ಸುಮಾರು 100-150 ಮೀಟರ್ ಮೊದಲೇ ರಿಫ್ಲೇಕ್ಟಿವ್‌ ರಬ್ಬರ್ ಕೋನ್‌ಗಳನ್ನು ಹಾಗೂ ಸುರಕ್ಷತಾ ಸಲಕರಣೆಗಳನ್ನು ಅಳವಡಿಸುವುದು.

9.ರಾತ್ರಿ ಮತ್ತು ತಡರಾತ್ರಿ ವೇಳೆ ಸಂಚಾರ ಸಿಗ್ನಲ್ ದೀಪಗಳಿರುವ/ಜಂಕ್ಷನ್‌ಗಳ ಬದಿಯಲ್ಲೇ ವಾಹನಗಳನ್ನು ತಪಾಸಣೆ ಮಾಡುವುದು ಸೂಕ್ತ.

10.ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರು ನಡೆಸುವ ನಾಕಾಬಂಧಿಗಳನ್ನು ಹೆದ್ದಾರಿಗಳಲ್ಲಿ ನಡೆಸಬಾರದು. ತಪಾಸಣೆ ಸಂದರ್ಭದಲ್ಲಿ ಸುರಕ್ಷತಾ ಹಿತದೃಷ್ಟಿಯಿಂದ ಸಂಚಾರ ಪೊಲೀಸರ ಸಹಕಾರವನ್ನು ಪಡೆಯಬೇಕು.

ಒಟ್ಟಾರೆಯಾಗಿ ಡಿಜಿಪಿ ಯವರ ಆದೇಶ ಕೇವಲ ಕಾಗದದಲ್ಲಿ ಉಳಿಯದೇ ಆದಷ್ಟು ಬೇಗ ಜಾರಿಗೆ ಬರಲಿ ಎಂದು ಸಾರ್ವಜನಿಕರು ಕಾಯುತಿದ್ದಾರೆ…….

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

14 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

14 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

14 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

17 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

20 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

21 hours ago