ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ
ಶಿವಮೊಗ್ಗ : ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ವ್ಯಾನಿಟಿ ಬ್ಯಾಗ್ನಲ್ಲಿದ್ದ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿವಾಸಿ ಪಾಲಾಕ್ಷಮ್ಮ ಅವರ ಮಗಳು ಅಡಮಾನವಿಟ್ಟಿದ್ದ ಒಡವೆಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ಹೇಳಿದ್ದರಿಂದ ತಮ್ಮ ಗ್ರಾಮದ ಬಳಿ ಇರುವ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ೧,೭೫,೦೦೦ ಹಣವನ್ನು ಬಿಡಿಸಿಕೊಂಡು ಜೂನ್ ೧೪ರಂದು ಎನ್ಆರ್ ಪುರದಲ್ಲಿರುವ ಅವಳ ಮನೆಗೆ ಹೊರಟಿದ್ದರು.
ಕಡೂರಿನಿಂದ ಶಿವಮೊಗ್ಗಕ್ಕೆ ಬಂದು ನಂತರ ಶೃಂಗೇರಿ ಬಸ್ ಹತ್ತಲು ಮುಂದಾಗಿದ್ದರು.ಮಧ್ಯಾಹ್ನ ೩:೧೫ ರ ವೇಳೆ ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಶೃಂಗೇರಿ ಬಸ್ ಹತ್ತಲು ಹೋದಾಗ ಈ ಘಟನೆ ಸಂಭವಿಸಿದೆ. ಬಸ್ನಲ್ಲಿ ಸೀಟು ಹಿಡಿಯಲು ಮಹಿಳೆ ತಮ್ಮ ವ್ಯಾನಿಟಿ ಬ್ಯಾಗ್ ಹಾಕಿದ್ದರು. ನಂತರ ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ೧,೭೫,೦೦೦ ಹಣದ ಕಟ್ಟು ಇರಲಿಲ್ಲ. ತಕ್ಷಣ ಗಾಬರಿಯಾಗಿ ಬಸ್ಟ್ಯಾಂಡ್ನಲ್ಲಿ ಎಲ್ಲಾ ಕಡೆ ಹುಡುಕಿದರೂ ಸಿಕ್ಕಿಲ್ಲ. ಬಸ್ ಹತ್ತುವ ಸಮಯದಲ್ಲಿ ವ್ಯಾನಿಟಿ ಬ್ಯಾಗ್ನಲ್ಲಿದ್ದ ೧,೭೫,೦೦೦ ಕಳ್ಳತನವಾಗಿದೆ ಎಂದು ಮಹಿಳೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…