Breaking
12 Jan 2026, Mon

ಲೈಂಗಿಕ ಕಿರುಕುಳದ ಆರೋಪ : ಮೆಗ್ಗಾನ್ ಭೋಧನಾ ಆಸ್ಪತ್ರೆಯ ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ

ಲೈಂಗಿಕ ಕಿರುಕುಳದ ಆರೋಪ: ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ

ಶಿವಮೊಗ್ಗ: ನಗರದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ|| ಅಶ್ವಿನ್ ಹೆಬ್ಬಾರ್  ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ  ಆರೋಪದ ಹಿನ್ನೆಲೆಯಲ್ಲಿ  ಅವರನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ಪೀಪಲ್ ಲಾಯರ್ಸ್ ಗೀಲ್ಡ್‌ನ ಮುಖ್ಯಸ್ಥ ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ.

ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಕರಣ ದಾಖಲಾಗುತ್ತಿದ್ದಂತೆ ಡಾ|| ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಆತನನ್ನು ಹುಡುಕಿ ಬಂಧಿಸಬೇಕು. ಪೊಲೀಸರು ಕೂಡ ಸುಮ್ಮನಿದ್ದಾರೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಿಮ್ಸ್ ಆಡಳಿತ ಮಂಡಳಿಯಾಗಲಿ, ಅಲ್ಲಿನ ಅಧೀಕ್ಷಕ ಡಾ|| ವಿರುಪಾಕ್ಷಪ್ಪ ಅವರಾಗಲಿ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.

ಕಿರುಕುಳಕ್ಕೆ ಒಳಗಾದ ಮೆಡಿಕಲ್ ವಿದ್ಯಾರ್ಥಿನಿ ಐದು ದಿನದ ಹಿಂದೆಯೇ ದೂರು ನೀಡಿದ್ದಾಳೆ. ಆದರೂ  ಯಾವುದೇ ಕ್ರಮವನ್ನು ಜರಯಿಸಿಲ್ಲ.  ಪೊಲೀಸರು ಎಫ್ ಐಆರ್ ಮಾಡಿದ್ದರೂ ಕೂಡ ಇದೂವರೆಗೆ ಆತನನ್ನು ಬಂಧಿಸಿಲ್ಲ.  ರಾಜ್ಯ ಸರ್ಕಾರದ ಗಮನಕ್ಕೆ ತಂದರೂ ಕೂಡ ಪ್ರಯೋಜನವಾಗಿಲ್ಲ. ಇನ್ನಾದರೂ ಸರ್ಕಾರ ಮಧ್ಯಪ್ರವೇಶ ಮಾಡಿ, ಆರೋಪಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.  ಇಲ್ಲದಿದ್ದರೆ ಲಾಯರ್ಸ್ ಗೀಲ್ಡ್ ಮೂಲಕವೇ ಹೈಕೋರ್ಟ್‌ನಲ್ಲಿ ಸುಮೋಟೋ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಸಣ್ಣಪುಟ್ಟ ಆರೋಪಿಗಳನ್ನು ಪೊಲೀಸರು ಬಂಧಿಸುತ್ತಾರೆ. ಆದರೆ ಈ ವೈದ್ಯರ ಬಂಧನಕ್ಕೆ ವಿಳಂಬವೇಕೆ ಎಂದು ಪ್ರಶ್ನಿಸಿದ ಅವರು, ನಿರ್ದೇಶಕ ಸೇರಿ ಇಡೀ ಮೆಗ್ಗಾನ್ ಆಡಳಿತ ಮಂಡಳಿಯನ್ನು ಅಮಾನತಿನಲ್ಲಿಡಬೇಕು. ಈ ವೈದ್ಯ ವಿದ್ಯಾರ್ಥಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ  ಪ್ರಕರಣ ಅವರಿಗೆ ಮೊದಲಿನದಲ್ಲ. ಕಾಶ್ಮೀರ ಮೂಲದ ವೈದ್ಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ. ಅದು ನ್ಯಾಯಾಲಯದ ಮೆಟ್ಟಿಲು ಕೂಡ ಏರಿದೆ. ನ್ಯಾಯಾಲಯದಿಂದ ಸದ್ಯಕ್ಕೆ ತಡೆಯಾಜ್ಞೆ ಇದ್ದರೂ ಕೂಡ ಪ್ರಕರಣ ಇತ್ಯರ್ಥವಾಗಿಲ್ಲ. ಇಷ್ಟಾದರೂ ಕೂಡ ಈಗ ಮತ್ತೆ ಅದೇ ರೀತಿಯ ವರ್ತನೆಯನ್ನು ಆತ ತೋರಿಸಿದ್ದಾನೆ ಎಂದು ಹೇಳಿದರು.
ವಕೀಲರಾದ ಷಹರಾಜ್ ಸಿದ್ದಿಕಿ, ವಿಜಯ್ ಟಿ. ಉಪಸ್ಥಿತರಿದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Exit mobile version