ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್
ರಿಪ್ಪನ್ ಪೇಟೆ : ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್ ಹೇಳಿದರು
ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗರ್ತಿಕೆರೆ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿವರ್ಷ ಜೂನ್ 26ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.ಇಂದಿನ ಯುವಕರು ತಂದೆ, ತಾಯಿ ಹಾಗೂ ಗುರುಗಳ ಋಣ ಎಂದಿಗೂ ಮರೆಯಬಾರದು. ಸದ್ಗುಣ ಸಚ್ಚಾರಿತ್ರ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಬೇಕು. ಮಾದಕ ವಸ್ತುಗಳು ನಮ್ಮ ವ್ಯಕ್ತಿತ್ವಕ್ಕೆ ಹಾಗೂ ಆರೋಗ್ಯಕ್ಕೆ ಮಾರಕವಾಗಿವೆ. ಇನ್ನು ಮೊಬೈಲ್ ಎಷ್ಟು ಪ್ರಯೋಜನವಾಗಿದೆ ಅಷ್ಟೇ ದುಷ್ಪರಿಣಾಮವಿದೆ. ವಿದ್ಯಾರ್ಥಿಗಳಾದ ನೀವು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಈ ಸಂಧರ್ಭದಲ್ಲಿ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ , ಅಬಕಾರಿ ವೃತ್ತ ನಿರೀಕ್ಷಕ ನಾಗರಾಜ್ ರಿಪ್ಪನ್ ಪೇಟೆ ಪಿಎಸ್ಐ ರಾಜುರೆಡ್ಡಿ ಹಾಗೂ ಇನ್ನಿತರರಿದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…