ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು.

ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸಲಾಗುವುದು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಅಪರಾಧ ಕೃತ್ಯಗಳು ಸಂಭವಿಸುವ ಮೊದಲೇ ಅಥವಾ ನಂತರದಲ್ಲೂ ತಮಗೆ ಸಿಕ್ಕ ಮಾಹಿತಿಯನ್ನು ಪೊಲೀಸರಿಗೆ ನೀಡಬೇಕು ಎಂದರು.

ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿದ್ದು ಯಾವುದೇ ಸಮಸ್ಯೆ ಇದ್ದರೂ ನೇರವಾಗಿ ಠಾಣೆ ಬಂದು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದರು.

ಸಭೆಯಲ್ಲಿದ್ದ ಸಾರ್ವಜನಿಕರು ಪಟ್ಟಣದ ವ್ಯಾಪ್ತಿಯಲ್ಲಿ ಯುವಕರು ಗಾಂಜಾ ಸೇವನೆ ದಾಸರಾಗಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒಕ್ಕೊರಲಿನ ಮನವಿ ಸಲ್ಲಿಸಿ ,  ತೀರ್ಥಹಳ್ಳಿ ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್‌ ಬಳಿ ವಾಹನಗಳ ದಟ್ಟಣೆಯಿಂದಾಗಿ ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿರುವ ಬಗ್ಗೆ ಗಮನಕ್ಕೆ ತಂದು ಈ ಹಿಂದೆ ತಾವು ಠಾಣಾಧಿಕಾರಿಯಾಗಿದ್ದಾಗ  ನಾಲ್ಕು ರಸ್ತೆಯಲ್ಲಿ ದಿನ ಬಿಟ್ಟು ದಿನ ಒಂದೊಂದು ಕಡೆಯಲ್ಲಿ ವಾಹನ ನಿಲುಗಡೆ ಮಾಡುವಂತೆ ಕಡ್ಡಾಯ ಜಾರಿಗೊಳಿಸಿದ್ದು ಈಗ ಅದು ಇಲ್ಲದಂತಾಗಿ ವಿದ್ಯಾರ್ಥಿಗಳು, ವಯೋವೃದ್ದರು, ಮಹಿಳೆಯರು ರಸ್ತೆ ದಾಟುವುದು ಕಷ್ಟಕರವಾಗಿದೆ.ಇರುವ ಒಂದು ಬಸ್ ನಿಲ್ದಾಣದಲ್ಲಿ ಕುಡುಕರ ಹಾವಳಿಯಿಂದ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಠಾಣಾಧಿಕಾರಿಗಳ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದಿನಿಂದಲೇ ಈ ಮೇಲ್ಕಂಡ ಹಲವು ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿ ಗಾಂಜಾ ಗಿರಾಕಿಗಳ ಮೇಲೆ ಸೂಕ್ತ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದರು. ಹಾಗೇಯೆ ಗಾಂಜಾ ಸೇವನೆ ಹಾಗೂ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು 9480803365 ನಂಬರಿಗೆ ಕರೆ ಮಾಡುವ ಮೂಲಕ ತಿಳಿಸುವ ಮೂಲಕ ಇಲಾಖೆಗೆ ಸಹಕರಿಸಬೇಕಾಗಿದೆ ಹಾಗೇಯೇ ಮಾಹಿತಿದಾರರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಅರ್ ಎ ಚಾಬುಸಾಬ್ ,ಸುರೇಶ್ ಸಿಂಗ್ , ಟಿ ಆರ್ ಕೃಷ್ಣಪ್ಪ ಜುಮ್ಮಾ ಮಸೀದಿ ಕಾರ್ಯದರ್ಶಿ ಶೇಖಬ್ಬ, ಎಂ.ಸುರೇಶ್‌ಸಿಂಗ್, ಕುಕ್ಕಳಲೇ ಈಶ್ವರಪ್ಪ ಶೇಖಬ್ಬ , ಪಿಯೂಸ್ ,ಅಕ್ಬರ್ , ಮುರುಳಿ ಕೆರೆಹಳ್ಳಿ , ರವೀಂದ್ರ ಕೆರೆಹಳ್ಳಿ , ಶ್ರೀಧರ್ , ತ ಮ ನರಸಿಂಹ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

16 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

16 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

16 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

19 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

23 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

23 hours ago