ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ

ರಿಪ್ಪನ್ ಪೇಟೆ : ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವ ಸಮೂಹ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಹೊಂದಿರಬೇಕು ಆಗ ಮಾತ್ರ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳಿಂದ ಮತ್ತು  ಅಪಾಯದಿಂದ ಪಾರಾಗಬಹುದು ಎಂದು ರಿಪ್ಪನ್ ಪೇಟೆಯ ನೂತನ  ಪಿಎಸ್ಐ ರಾಜುರೆಡ್ಡಿ ಹೇಳಿದರು.

ಪಟ್ಟಣದ ರೋಟರಿ ಕ್ಲಬ್ ಹಾಗೂ ಪೊಲೀಸ್ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತೆಯ ಅರಿವು ಕಾರ್ಯಕ್ರಮದಲ್ಲಿ  ಉಪನ್ಯಾಸ ನೀಡಿದ ಅವರು ಭಾರತದಲ್ಲಿ ಅತಿ ಹೆಚ್ಚು ಸಾವು ನೋವುಗಳು ರಸ್ತೆ ಅಪಘಾತಗಳಿಂದ ಉಂಟಾಗುತ್ತಿದ್ದು ಪ್ರತಿವರ್ಷ ಭಾರತದಲ್ಲಿ 5 ಲಕ್ಷಕ್ಕೂ ಅಧಿಕ ಜನರು ರಸ್ತೆ ಅಪಘಾತದಲ್ಲಿ ಮರಣ ಹೊಂದಿದ್ದು ಇದು ವಿಷಾದದ ಸಂಗತಿಯಾಗಿದೆ, ಇದಕ್ಕೆ ಮೂಲ ಕಾರಣ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಇಲ್ಲದೆ ಇರುವುದು, ವಾಹನಗಳನ್ನು ಚಲಾಯಿಸುವಾಗ ಅತಿಯಾದ ವೇಗ, ಮದ್ಯಪಾನವನ್ನು ಮಾಡಿ ವಾಹನವನ್ನು ಚಲಾಯಿಸುವುದು, ವಾಹನಗಳನ್ನು ಚಲಾಯಿಸುವಾಗ ಸರ್ಕಾರವು ಮತ್ತು ರಸ್ತೆ ಸಾರಿಗೆ ಇಲಾಖೆಯವರು  ಸೂಚಿಸಿರುವ ನೀತಿ ನಿಯಮಗಳನ್ನು ಅನುಸರಿಸದೇ ಇರುವುದು ವಾಹನಗಳ ಹೆಚ್ಚಿನ ಅಪಘಾತಕ್ಕೆ ಕಾರಣವಾಗಿದೆ ಎಂದರು.

ಅಪ್ರಾಪ್ತ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವಾಹನಗಳನ್ನು ಚಲಾಯಿಸಲು ಹೋಗಬಾರದು, ಹಾಗೆಯೇ ಪೋಷಕರು ತಮ್ಮಲ್ಲಿರುವ ವಾಹನಗಳನ್ನು ಅಪ್ರಾಪ್ತ ಮಕ್ಕಳಿಗೆ ಚಲಾಯಿಸಲು ಕೊಡಬಾರದು, ಅಪ್ರಾಪ್ತರು ವಾಹನಗಳನ್ನು ಚಲಾಯಿಸಿದರೆ ಹಾಗೂ ಪೋಷಕರು ತಮ್ಮ ಮಕ್ಕಳಿಗೆ ವಾಹನಗಳನ್ನು ಚಲಾಯಿಸಲು ನೀಡಿದರೆ ನ್ಯಾಯಾಲಯಗಳು ಭಾರಿ ಮೊತ್ತದ ದಂಡವನ್ನು ವಿಧಿಸುತ್ತದೆ, ಈ ಬಗ್ಗೆ ಅಪ್ಪ್ಯಾಪ್ತ ವಿದ್ಯಾರ್ಥಿಗಳು ಹಾಗೂ ಪೋಷಕರುಅರಿವನ್ನು ಹೊಂದಿರಬೇಕು ಎಂದರು.

ಹಾಗೆಯೇ ವಿದ್ಯಾರ್ಥಿಗಳು ಮೊಬೈಲ್ ಗಳನ್ನು ಬಳಸುವಾಗ ಬಹಳ ಎಚ್ಚರಿಕೆಯಿಂದ ಇರಬೇಕು, ವಿದ್ಯಾರ್ಥಿಗಳ ಮೊಬೈಲುಗಳಿಗೆ ಅಪರಿಚಿತ ಕರೆಗಳು ಹಾಗೂ ಸಂದೇಶಗಳು ಬಂದಾಗ ಕರೆಗಳನ್ನು ಹಾಗೂ ಸಂದೇಶಗಳನ್ನು ಸ್ವೀಕರಿಸಬಾರದು, ತಮ್ಮ ಮೊಬೈಲುಗಳಿಗೆ ಅಪರಿಚಿತರಿಂದ ಸಂದೇಶಗಳು ಬಂದಾಗ ಆಕಸ್ಮಿಕವಾಗಿ ಸಂದೇಶಗಳನ್ನು ತೆರೆದಾಗ ಕೆಲವೊಮ್ಮೆ ವಿದ್ಯಾರ್ಥಿಗಳ ಬ್ಯಾಂಕಿನಖಾತೆಯಲ್ಲಿರುವ ಎಲ್ಲಾ ಹಣವು ಕ್ಷಣ ಮಾತ್ರದಲ್ಲಿ ಸಂದೇಶಗಳನ್ನು ಕಳಿಸಿದವರ ಖಾತೆಗೆ ವರ್ಗಾವಣೆ ಆಗುತ್ತದೆ, ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಯುವ ಸಮೂಹ ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಿದರು.

ರೋಟರಿ ಜಿಲ್ಲಾ 31 82ರ ಅಸಿಸ್ಟೆಂಟ್ ಗವರ್ನರ್ ಹಾಗೂ ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಚಾರ್ಯ ಸುರೇಶ್ ಹೆಚ್.ಎಂ ಮಾತನಾಡಿ ಪ್ರಸ್ತುತ ಭಾರತದಲ್ಲಿ ಉಂಟಾಗುತ್ತಿರುವ ರಸ್ತೆ ಅಪಘಾತಗಳಲ್ಲಿ ಯುವ ಸಮೂಹ ಹೆಚ್ಚು ಬಲಿಯಾಗುತ್ತಿದ್ದಾರೆ, ಇದಕ್ಕೆ ಕಾರಣ ಅತಿಯಾದ ವೇಗ ಮತ್ತು ಚಾಲನೆಯಲ್ಲಿ ನಿರ್ಲಕ್ಷ, ಯಾವುದೇ ಕಾರಣಕ್ಕೂ ಅಪ್ಪ್ತಾಪ್ತರು ಹಾಗೂ ಡ್ರೈವಿಂಗ್ ಲೈಸೆನ್ಸ್ ಇಲ್ಲದ ಯುವ ಸಮೂಹ ವಾಹನ ಚಾಲನೆಗೆ ಮುಂದಾಗಬಾರದು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಚಾಲನೆ ಮತ್ತು ರಸ್ತೆ ಸುರಕ್ಷತೆ ಬಗ್ಗೆ ಅರಿವನ್ನು ಹೊಂದಿದರೆ ರಸ್ತೆ ಅಪಘಾತಗಳಿಂದ ಪಾರಾಗಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ, ಜಿಲ್ಲಾ 31 82ರ ನಿಯೋಜಿತ ಅಸಿಸ್ಟೆಂಟ್ ಗವರ್ನರ್ ಎಂ.ಬಿ ಲಕ್ಷ್ಮಣಗೌಡ, ವಲಯ ಸೇನಾನಿ ರಾಧಾಕೃಷ್ಣ ಜೆ, ಕಾಯದರ್ಶಿ ಸಬಾಸ್ಟಿನ್, ಹಾಗೂ ರೋಟರಿ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರುಗಳು, ರಿಪ್ಪನ್ ಪೇಟೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ರಕ್ಷಣಾ ಇಲಾಖೆಯ ರಾಮಚಂದ್ರ ಇನ್ನಿತರದಿದ್ದರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

15 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

15 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

15 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

18 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

22 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

22 hours ago