ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್
ಶಿವಮೊಗ್ಗ ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು.
‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿದರು.
ಪ್ರಮುಖ ವೃತ್ತ, ರಸ್ತೆಗಳಲ್ಲಿ ವಾಹನಗಳ ತಪಾಸಣೆ ನಡೆಸಲಾಗಿದೆ. ನಿಗದಿತ ವೇಗದಲ್ಲಿ ವಾಹನ ಚಲಾಯಿಸಬೇಕು. ಸಂಚಾರಿ ನಿಯಮಗಳ ಸಮರ್ಪಕ ಪಾಲನೆ ಮಾಡಬೇಕು. ಹೆಚ್ಚಿನ ಮಕ್ಕಳನ್ನು ವಾಹನಗಳಲ್ಲಿ ಕೊಂಡೊಯ್ಯಬಾರದು.
ವಾಹನಗಳಿಗೆ ಸಂಬಂಧಿಸಿದ ಎಲ್ಲ ದಾಖಲಾತಿಗಳನ್ನು ಹೊಂದಿರಬೇಕು. ಇನ್ಸೂರೆನ್ಸ್, ಹೊಗೆ ತಪಾಸಣೆ, ಫಿಟ್ನೆಸ್ ಸರ್ಟಿಫಿಕೇಟ್ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ವಾಹನಗಳ ಚಾಲಕರಿಗೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…