ಮಹಿಳೆಯೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಸ್ವಾಮೀಜಿ: ಮಠದಿಂದಲೇ ಹೊರಹಾಕಿದ ಗ್ರಾಮಸ್ಥರು
ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ. ಸ್ವಾಮೀಜಿ ವಿರುದ್ದ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದ್ದು ಗ್ರಾಮಸ್ಥರು ಸ್ವಾಮೀಜಿಯನ್ನೇ ಮಠದಿಂದ ಹೊರಹಾಕಿದ್ದಾರೆ.
ಪ್ರಸಿದ್ದ ದೇವಸ್ಥಾನ ಎಂದು ಅಡವಿಸಿದ್ದೇಶ್ವರ ಮಠ ಹೆಸರು ವಾಸಿಯಾಗಿದ್ದು, ಅಡವಿಸಿದ್ದರಾಮ ಸ್ವಾಮೀಜಿ ಮೇಲೆ ರಾಸಲೀಲೆ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಸ್ವಾಮೀಜಿಯನ್ನು ಗ್ರಾಮಸ್ಥರು ಮಠದಿಂದ ಹೊರ ಹಾಕಿದ್ದಾರೆ.
ಬಿಜಾಪುರ ಜಿಲ್ಲೆಯ ತಾಳಿಕೋಟೆಯ ಗ್ರಾಮದಿಂದ ತನ್ನ ಮಗಳೊಂದಿಗೆ ಮಠಕ್ಕೆ ಮಹಿಳೆಯೊಬ್ಬರು ಆಗಮಿಸಿದ್ದರು. ತಡರಾತ್ರಿ ಮಹಿಳೆ ಸ್ವಾಮೀಜಿ ಕೊಠಡಿಯಲ್ಲಿ ಇದ್ದಿದ್ದನ್ನು ಗಮನಿಸಿದ ಸ್ಥಳೀಯರು ಈ ವಿಚಾರವನ್ನು ಗ್ರಾಮದ ಮುಖಂಡರಿಗೆ ತಿಳಿಸಿದ್ದಾರೆ.
ತಕ್ಷಣ ಮಠಕ್ಕೆ ಆಗಮಿಸಿ ಸ್ವಾಮೀಜಿಯನ್ನು ಹಾಗೂ ಮಹಿಳೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತಡರಾತ್ರಿಯೇ ಆ ಮಹಿಳೆ ಮತ್ತು ಮಗಳನ್ನು ಸಾಂತ್ವಾನ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದು ನಂತರ ಗ್ರಾಮಸ್ಥರು ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಮಾಡಿ ಸ್ವಾಮೀಜಿಯನ್ನ ಮಠದಿಂದ ಹೊರಹಾಕಿದ್ದಾರೆ.
ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…