ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ
ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್ಪೇಟೆ ಸಮೀಪದಲ್ಲಿರುವ ಕೋಡೂರಿನಲ್ಲಿ ಈ ಘಟನೆ ನಡೆದಿದೆ. ಉಡುಪಿ ಕಡೆಗೆ ತೆರಳುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆದರೆ ಶಾಸಕರು ಹಾಗೂ ಕಾರಿನಲ್ಲಿ ಇದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗದ ಕಡೆಗೆ ಶಾಸಕರ ಕಾರು ಚಲಿಸುತ್ತಿದ್ದ ವೇಳೆಯಲ್ಲಿ ಜಾನುವಾರು ಅಡ್ಡಬಂದಿದೆ. ಈ ವೇಳೆಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಆದರೆ ಯಾರಿಗೂ ಯಾವುದೇ ಅಪಾಯ ಉಂಟಾಗಿಲ್ಲ.
ಉಡುಪಿಗೆ ತೆರಳಬೇಕಾಗಿದ್ದ ಶಾಸಕರು ಸದ್ಯ ಬೇರೊಂದು ಕಾರಿನ ಮೂಲಕ ಬೈಂದೂರಿಗೆ ತೆರಳಿದ್ದಾರೆ.
ಈ ಕುರಿತು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…