ಲಾರಿ ಹರಿದು ಮೂರು ವರ್ಷದ ಬಾಲಕ ಸಾವು
ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ ಪುತ್ರ ಮುಹಮ್ಮದ್ ಆಹಿಲ್ ಖಾನ್ (೩) ಮೃತ ಬಾಲಕ.
ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ ಬಾನು ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಬಾಲಕ ತಂದೆ ಉದ್ಯೋಗ ನಿಮಿತ್ತ ದುಬೈನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುದ್ದಿಗಾರರೊಂದಿಗೆ ಗ್ರಾಮ ಸಲಹಾ ಸಮಿತಿ ಅಧ್ಯಕ್ಷ ಬಿ. ಈಶ್ವರಪ್ಪ ಮಾತನಾಡಿ, ಗ್ರಾಮದಲ್ಲಿ ರಸ್ತೆ ಅಗಲೀಕರಣವಾಗುತ್ತಿದೆ. ಅಂಗನವಾಡಿ ಕೇಂದ್ರವು ರಸ್ತೆಯ ಪಕ್ಕದಲ್ಲಿರುವುದೇ ಘಟನೆಗೆ ಕಾರಣ. ಅದನ್ನು ಸ್ಥಳಾಂತರ ಮಾಡಬೇಕು. ನೂತನ ಅಂಗನವಾಡಿ ಕಟ್ಟಡವನ್ನು ಗ್ರಾಮದ ಒಳ ಭಾಗದಲ್ಲಿ ನಿರ್ಮಿಸಲು ನಿವೇಶನ ನೀಡಲಾಗುವುದು. ಜೊತೆಗೆ, ಟಿಪ್ಪರ್, ಕ್ಯಾಂಟರ್ ಸೇರಿದಂತೆ ಇತರೆ ಲಾರಿಗಳು ಗ್ರಾಮಗಳ ಪರಿಮಿತಿಯಲ್ಲಿ ವೇಗಮಿತಿಯಿಲ್ಲದೇ ವಾಹನ ಚಲಾಯಿಸುತ್ತಾರೆ. ಅವರ ಮೇಲೆ ಸಂಬಂಧ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…